12:18 AM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ನಿಯಮ ಉಲ್ಲಂಘನೆ; ಇಂಡಿಗೋ, ಸ್ಪೈಸ್​ಜೆಟ್​ ಬಳಿಕ ಏರ್​ ವಿಸ್ತಾರಾಗೂ ಬಿತ್ತು 10 ಲಕ್ಷ ರೂ. ದಂಡ..!

03/06/2022, 11:53

ಹೊಸದಿಲ್ಲಿ(reporterkarnataka.com): ಕೆಲ ದಿನಗಳ ಹಿಂದೆ ಇಂಡಿಗೋ ಹಾಗೂ ಸ್ಪೈಸ್​ಜೆಟ್​ ಏರ್​ಲೈನ್ಸ್​ಗೆ ದಂಡ ವಿಧಿಸಿದ್ದ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ(ಡಿಜಿಸಿಎ) ಇದೀಗ ಏರ್​ ವಿಸ್ತಾರಾಗೂ 10 ಲಕ್ಷ ರೂಪಾಯಿ ದಂಡ ಹಾಕಿದೆ.

ಮಧ್ಯಪ್ರದೇಶದ ಇಂದೋರ್​​ ವಿಮಾನ ನಿಲ್ದಾಣದಲ್ಲಿ ತರಬೇತಿ ಇಲ್ಲದ ಪೈಲಟ್​​ನಿಂದ ಪ್ರಯಾಣಿಕರಿದ್ದ ವಿಮಾನ ಲ್ಯಾಂಡಿಂಗ್ ಮಾಡಿಸಿದ್ದಕ್ಕಾಗಿ ಈ ದಂಡ ವಿಧಿಸಿರುವುದಾಗಿ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.

ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಡಿಜಿಸಿಎ ನೀಡಿರುವ ಟೇಕಾಫ್​ ಮತ್ತು ಲ್ಯಾಂಡಿಂಗ್​ ಕ್ಲಿಯರೆನ್ಸ್​ ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ಏರ್​ಲೈನ್ಸ್​ ಕಂಪನಿಗೆ ದಂಡ ಹಾಕಲಾಗಿದೆ. ಏರ್​​ಲೈನ್ಸ್​ ಕಂಪನಿ ತೆಗೆದುಕೊಂಡಿರುವ ನಿಯಮದಿಂದ ಪ್ರಯಾಣಿಕರ ಜೀವಕ್ಕೆ ಕುತ್ತು ಬರುವ ಸಾಧ್ಯತೆ ಇತ್ತು. ಇದೊಂದು ಗಂಭೀರ ನಿಯಮ ಉಲ್ಲಂಘನೆ ಅಪರಾಧವಾಗಿದೆ ಎಂದಿದೆ.

ಸಿಮ್ಯುಲೇಟರ್​​ನಲ್ಲಿ ಅಗತ್ಯ ತರಬೇತಿ ಪಡೆಯದ ಪೈಲಟ್​​ ವಿಮಾನ ಲ್ಯಾಂಡ್ ಮಾಡಿದ್ದು, ಫರ್ಸ್ಟ್ ಆಫೀಸರ್ ವಿಮಾನವನ್ನು ಲ್ಯಾಂಡ್ ಮಾಡುವುದಕ್ಕೂ ಮುನ್ನ ಸಿಮ್ಯುಲೇಟರ್​​ನಲ್ಲಿ ತರಬೇತಿ ಪಡೆದಿರಬೇಕು. ಈ ರೀತಿ ತರಬೇತಿ ಪಡೆದವರನ್ನು ಲ್ಯಾಂಡ್ ಮಾಡುವುದಕ್ಕೆ ಅನುಮತಿಸುವ ಕ್ಯಾಪ್ಟನ್ ಸಹ ತರಬೇತಿ ಪಡೆದಿರಬೇಕು ಎಂದು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೇ 30ರಂದು ಈ ಘಟನೆ ನಡೆದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು