2:02 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಚೀನಾದಲ್ಲಿ ಭೂಕಂಪ: 14,427 ಮಂದಿ ಬೀದಿಪಾಲು 4,500ಕ್ಕಿಂತ ಹೆಚ್ಚು ಜನರ ಸ್ಥಳಾಂತರ

03/06/2022, 21:59

ಬೀಜಿಂಗ್ (reporterkarnataka.com): ನೈಋತ್ಯ ಚೀನಾದ ಸಿಚುವಾನ್‌ನಲ್ಲಿರುವ ಯಾನ್ ನಗರದಲ್ಲಿ ಬುಧವಾರ 6.1 ತೀವ್ರತೆಯ ಭೂಕಂಪ ಸಂಭವಿಸಿದ್ದು, ನಾಲ್ವರು ಸಾವನ್ನಪಿದ್ದಾರೆ.

41 ಮಂದಿ ಗಾಯಗೊಂಡಿದ್ದಾರೆ. 14,427ಕ್ಕೂ ಅಧಿಕ ಮಂದಿ ಮನೆ ಕಳೆದುಕೊಂಡಿದ್ದಾರೆ. ಅವಶೇಷಗಳಡಿ ಸಿಲುಕಿದವರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗಿದೆ.

ಭೂಕಂಪದಿಂದ ಒಟ್ಟು 14,427 ಜನರು ಬಾಧಿತರಾಗಿದ್ದಾರೆ ಎಂದು ಪ್ರಾಥಮಿಕ ಅಂಕಿಅಂಶಗಳನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ತುರ್ತು ರಕ್ಷಣಾ ಪ್ರಯತ್ನಗಳಿಗೆ ಮಾರ್ಗದರ್ಶನ ನೀಡಲು ಮತ್ತು ಸಹಾಯ ಮಾಡಲು ರಕ್ಷಣಾ ತಂಡಗಳನ್ನು ಕಳುಹಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಸ್ಥಳೀಯ ಅಗ್ನಿಶಾಮಕ ದಳ, ತುರ್ತು ರಕ್ಷಣಾ, ಸಶಸ್ತ್ರ ಪೊಲೀಸ್, ವೈದ್ಯಕೀಯ ಸಿಬ್ಬಂದಿ ಮತ್ತು ಸಾರ್ವಜನಿಕ ಭದ್ರತಾ ಕಚೇರಿ ಸೇರಿದಂತೆ 800ಕ್ಕೂ ಹೆಚ್ಚು ಸಿಬ್ಬಂದಿಯನ್ನು ಈಗಾಗಲೇ ಭೂಕಂಪ ಪೀಡಿತ ಪ್ರದೇಶಗಳಿಗೆ ಕಳುಹಿಸಲಾಗಿದೆ.

ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ 4,500ಕ್ಕಿಂತ ಹೆಚ್ಚು ಜನರನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಭೂಕಂಪದಿಂದ ಅಪಾರ ಆಸ್ತಿ-ಪಾಸ್ತಿ ನಷ್ಟವಾಗಿದೆ. ಇದೀಗ ಸುಮಾರು 14,427 ಮಂದಿ ನಿರಾಶ್ರತಿರಾಗಿರುವುದಾಗಿ ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು