7:30 PM Tuesday28 - April 2026
ಬ್ರೇಕಿಂಗ್ ನ್ಯೂಸ್
ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು

ಇತ್ತೀಚಿನ ಸುದ್ದಿ

ಪದವು ಸೆಂಟ್ರಲ್ ವಾರ್ಡಿನ ಕುಟುಂಬಗಳಿಗೆ ಶಾಸಕ ವೇದವ್ಯಾಸ್ ಕಾಮತ್  ಹಕ್ಕುಪತ್ರ ವಿತರಣೆ

03/06/2022, 22:21

ಮಂಗಳೂರು(reporterkarnataka.com);.ಮಂಗಳೂರು ಮಹಾನಗರ ಪಾಲಿಕೆಯ ಪದವು ಸೆಂಟ್ರಲ್ ವಾರ್ಡಿನ ಕುಟುಂಬಗಳಿಗೆ ಶಾಸಕ ವೇದವ್ಯಾಸ್ ಕಾಮತ್  ಹಕ್ಕುಪತ್ರ ವಿತರಣೆ ಮಾಡಿದರು.

ಈ ವೇಳೆ ಮಾತನಾಡಿದ ಶಾಸಕ ಕಾಮತ್, ಕಳೆದ 3 ವರ್ಷಗಳಲ್ಲಿ ಅನೇಕ ಕುಟುಂಬಗಳಿಗೆ ಹಕ್ಕುಪತ್ರ ನೀಡಲಾಗಿದೆ. ಇನ್ನೂ ಕೆಲವೊಂದು ಹಕ್ಕುಪತ್ರ ನೀಡಲು ಬಾಕಿಯಿದ್ದು ತ್ವರಿತವಾಗಿ ಅವುಗಳನ್ನು ವಿಲೇವಾರಿ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು‌. 

ಸ್ವಂತ ಸೂರು ಕಟ್ಟಿಕೊಳ್ಳುವುದು ಪ್ರತಿಯೊಬ್ಬರ ಕನಸು. ಕಳೆದ ಕೆಲವು ವರ್ಷಗಳಿಂದ ಹಕ್ಕುಪತ್ರಕ್ಕಾಗಿ ಅಲೆದಾಡಿದ ಬಡ ಕುಟುಂಬಗಳಿಗೆ ನಮ್ಮ ಅವಧಿಯಲ್ಲಿ ಹಕ್ಕುಪತ್ರ ನೀಡಲಾಗಿದೆ. ಅಭಿವೃದ್ಧಿಯ ಜೊತೆ ಜೊತೆಗೆ ಇಂತಹ ಕಾರ್ಯಗಳನ್ನೂ ಕೂಡ ಮಾಡಲಾಗಿದೆ ಎಂದು ಹೇಳಿದರು‌. 

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಸ್ಥಳೀಯ ಕಾರ್ಪೋರೇಟರ್ ಕಿಶೋರ್ ಕೊಟ್ಟಾರಿ, ಉಪ ಆಯುಕ್ತರಾದ (ಅಡಳಿತ )ರವಿ ಕುಮಾರ್, ಸಮುದಾಯ ವ್ಯವಹಾರ ಅಧಿಕಾರಿ ಮಾಲಿನಿ ರೋಡ್ರಿಗಸ್, ನಗರ ಅಭಿಯಾನ  ವ್ಯವಸ್ಥಾಪಕರು ಎನ್. ಚಿತ್ತರಂಜನ್ ದಾಸ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು