7:23 AM Wednesday23 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಕುಕ್ಕಿಕಟ್ಟೆಯಲ್ಲಿ ಬೈಕ್ ಸ್ಕಿಡ್: ಸಹ ಸವಾರ ಸಾವು 

05/06/2022, 10:43

ಹಿರಿಯಡ್ಕ(reporterkarnataka.com):

ಪಲ್ಸರ್ ಬೈಕ್ ವೊಂದು ಸ್ಕಿಡ್ ಆದ ಪರಿಣಾಮ ಸಹಸವಾರ ಮೃತಪಟ್ಟ ಘಟನೆ ಉಡುಪಿ ತಾಲೂಕಿನ ಕುಕ್ಕಿಕಟ್ಟೆ ಮಾಧವ ಪ್ರಭು ಹಾರ್ಡ್ ವೇರ್‌ ಸಮೀಪ ಜೂನ್ 3ರಂದು‌ ನಡೆದಿದೆ.

ಮೃತರನ್ನು ಕೊಳಲಗಿರಿಯ ಲಿಗೋರಿ ಡಿಸೋಜ ಎಂದು ಗುರುತಿಸಲಾಗಿದೆ. ಲಿಗೋರಿ ಡಿಸೋಜ ಜೂ.3ರಂದು ಕೆಲಸದ ನಿಮಿತ್ತ ಜಾಯಿಲ್ ಡಿಸೋಜ ಎಂಬವರ ಪಲ್ಸರ್ ಬೈಕ್ ನಲ್ಲಿ ಕುಕ್ಕೆಹಳ್ಳಿಗೆ ಹೋಗಿದ್ದರು. ಅಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಮರಳಿ ಬರುತ್ತಿದ್ದ ವೇಳೆ ಕುಕ್ಕಿಕಟ್ಟೆ ಮಾಧವ ಪ್ರಭು ಹಾರ್ಡ್ ವೇರ್‌ ಸಮೀಪ ಬೈಕ್ ಸ್ಕಿಡ್ ಆಗಿದೆ. ಇದರ ಪರಿಣಾಮ ಸಹಸವಾರ ಲಿಗೋರಿಯವರ ತಲೆಗೆ ತೀವ್ರ ಪೆಟ್ಟಾಗಿದ್ದು, ಅವರನ್ನು ತಕ್ಷಣವೇ ಅದೇ ದಾರಿಯಲ್ಲಿ ಹೋಗುತ್ತಿದ್ದ. ವೀರೇಂದ್ರ ಆಚಾರ್ ಹಾಗೂ ಅಶ್ವಿನ್ ಎಂಬವರು ಮಣಿಪಾಲ ಕೆಎಂಸಿ ಅಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಲಿಗೋರಿ ಮೃತಪಟ್ಟಿದ್ದಾರೆ. ಸವಾರ ಜಾಯಿಲ್‌ ಸಣ್ಣಪುಟ್ಟ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು