8:27 PM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ನ ಪಿ. ಚಿದಂಬರಂ, ಬಿಜೆಪಿಯ ಸುಮಿತ್ರಾ ವಾಲ್ಮೀಕಿ ಸಹಿತ 41 ಮಂದಿ ಅವಿರೋಧ ಆಯ್ಕೆ

05/06/2022, 13:31

ಹೊಸದಿಲ್ಲಿ(reporterkarnataka.com); ರಾಜ್ಯಸಭೆಯ 57 ಸ್ಥಾನಗಳಿಗೆ ಜೂನ್ 10 ರಂದು ಚುನಾವಣೆ ನಿಗದಿಯಾಗಿದ್ದು, ಇದರಲ್ಲಿ 11 ರಾಜ್ಯಗಳಿಂದ 41 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕರ್ನಾಟಕದಲ್ಲಿ ಚುನಾವಣೆ ನಡೆಯಲಿದೆ.

ಉತ್ತರ ಪ್ರದೇಶದಲ್ಲಿ 11, ತಮಿಳುನಾಡಿನಲ್ಲಿ 6, ಬಿಹಾರದಲ್ಲಿ 5, ಆಂಧ್ರ ಪ್ರದೇಶದಲ್ಲಿ 4, ಮಧ್ಯಪ್ರದೇಶ ಮತ್ತು ಒಡಿಶಾದಲ್ಲಿ ತಲಾ ಮೂವರು, ಛತ್ತೀಸ್‌ಗಢ, ಪಂಜಾಬ್, ತೆಲಂಗಾಣ ಮತ್ತು ಜಾರ್ಖಂಡ್‌ನಲ್ಲಿ ತಲಾ ಇಬ್ಬರು ಮತ್ತು ಉತ್ತರಾಖಂಡದಲ್ಲಿ ಒಬ್ಬ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್‌ನ ಪಿ. ಚಿದಂಬರಂ ಮತ್ತು ರಾಜೀವ್ ಶುಕ್ಲಾ, ಬಿಜೆಪಿಯ ಸುಮಿತ್ರಾ ವಾಲ್ಮೀಕಿ ಮತ್ತು ಕವಿತಾ ಪಾಟಿದಾರ್, ಮಾಜಿ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್, ಆರ್‌ಜೆಡಿಯ ಮಿಸಾ ಭಾರತಿ ಮತ್ತು ಆರ್‌ಎಲ್‌ಡಿಯ ಜಯಂತ್ ಚೌಧರಿ ಮೇಲ್ಮನೆಗೆ ಅವಿರೋಧವಾಗಿ ಆಯ್ಕೆಯಾದವರಲ್ಲಿ ಪ್ರಮುಖರಾಗಿದ್ದಾರೆ.

ಹರಿಯಾಣ, ರಾಜಸ್ಥಾನ, ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಯಾವುದೇ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿಲ್ಲ. 

ಇತ್ತೀಚಿನ ಸುದ್ದಿ

ಜಾಹೀರಾತು