2:02 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ನ ಪಿ. ಚಿದಂಬರಂ, ಬಿಜೆಪಿಯ ಸುಮಿತ್ರಾ ವಾಲ್ಮೀಕಿ ಸಹಿತ 41 ಮಂದಿ ಅವಿರೋಧ ಆಯ್ಕೆ

05/06/2022, 13:31

ಹೊಸದಿಲ್ಲಿ(reporterkarnataka.com); ರಾಜ್ಯಸಭೆಯ 57 ಸ್ಥಾನಗಳಿಗೆ ಜೂನ್ 10 ರಂದು ಚುನಾವಣೆ ನಿಗದಿಯಾಗಿದ್ದು, ಇದರಲ್ಲಿ 11 ರಾಜ್ಯಗಳಿಂದ 41 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕರ್ನಾಟಕದಲ್ಲಿ ಚುನಾವಣೆ ನಡೆಯಲಿದೆ.

ಉತ್ತರ ಪ್ರದೇಶದಲ್ಲಿ 11, ತಮಿಳುನಾಡಿನಲ್ಲಿ 6, ಬಿಹಾರದಲ್ಲಿ 5, ಆಂಧ್ರ ಪ್ರದೇಶದಲ್ಲಿ 4, ಮಧ್ಯಪ್ರದೇಶ ಮತ್ತು ಒಡಿಶಾದಲ್ಲಿ ತಲಾ ಮೂವರು, ಛತ್ತೀಸ್‌ಗಢ, ಪಂಜಾಬ್, ತೆಲಂಗಾಣ ಮತ್ತು ಜಾರ್ಖಂಡ್‌ನಲ್ಲಿ ತಲಾ ಇಬ್ಬರು ಮತ್ತು ಉತ್ತರಾಖಂಡದಲ್ಲಿ ಒಬ್ಬ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್‌ನ ಪಿ. ಚಿದಂಬರಂ ಮತ್ತು ರಾಜೀವ್ ಶುಕ್ಲಾ, ಬಿಜೆಪಿಯ ಸುಮಿತ್ರಾ ವಾಲ್ಮೀಕಿ ಮತ್ತು ಕವಿತಾ ಪಾಟಿದಾರ್, ಮಾಜಿ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್, ಆರ್‌ಜೆಡಿಯ ಮಿಸಾ ಭಾರತಿ ಮತ್ತು ಆರ್‌ಎಲ್‌ಡಿಯ ಜಯಂತ್ ಚೌಧರಿ ಮೇಲ್ಮನೆಗೆ ಅವಿರೋಧವಾಗಿ ಆಯ್ಕೆಯಾದವರಲ್ಲಿ ಪ್ರಮುಖರಾಗಿದ್ದಾರೆ.

ಹರಿಯಾಣ, ರಾಜಸ್ಥಾನ, ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಯಾವುದೇ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿಲ್ಲ. 

ಇತ್ತೀಚಿನ ಸುದ್ದಿ

ಜಾಹೀರಾತು