2:34 PM Sunday15 - February 2026
ಬ್ರೇಕಿಂಗ್ ನ್ಯೂಸ್
ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ!

ಇತ್ತೀಚಿನ ಸುದ್ದಿ

ಮತ್ತೆ ನಿಷೇಧಿತ ಸ್ಯಾಟಲೈಟ್ ಫೋನ್ ಫೋನ್ ಸದ್ದು: ಮಂಗಳೂರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿಗ್ನಲ್ ಪತ್ತೆ?

05/06/2022, 22:08

ಮಂಗಳೂರು(reporterkarnataka.com):ಕರಾವಳಿ ಪ್ರದೇಶದಲ್ಲಿ ಉಗ್ರಗಾಮಿ, ನಕ್ಸಲ್ ಚಟುವಟಿಕೆ ನಡೆಯುತ್ತಿದೆಯೇ? ಅಂತಹದೊಂದು ಗುಮಾನಿಗೆ ಮತ್ತೆ ಜೀವ ಬಂದಿದೆ. ಕರಾವಳಿ ಭಾಗದಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ ಸಿಗ್ನಲ್ ಈಗಾಗಲೇ ಹಲವು ಬಾರಿ ಮತ್ತೆಯಾಗಿದೆ. ಇದೀಗ ಮತ್ತೆ ಸ್ಯಾಟಲೈಟ್ ಫೋನ್ ಸಿಗ್ನಲ್ ಪತ್ತೆಯಾಗಿದೆ.

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಉಗ್ರಗಾಮಿಗಳ ಸ್ಲೀಪರ್ ಸೆಲ್‌ಗಳು ಕಾರ್ಯಾಚರಿಸುತ್ತಿವೆ ಎಂಬ ಗುಮಾನಿ ನಡುವೆ ಸ್ಯಾಟಲೈಟ್ ಫೋನ್ ಬಳಕೆ ಮತ್ತೆ ಮತ್ತೆ ಪತ್ತೆಯಾಗುತ್ತಿರುವುದು ಪೊಲೀಸ್ ಇಲಾಖೆಗೆ

 ಆತಂಕ ಮೂಡಿಸಿದೆ. 6 ತಿಂಗಳ ಬಳಿಕ ಕರಾವಳಿಯ 3 ಕಡೆಗಳಲ್ಲಿ ಹಾಗೂ ಚಿಕ್ಕಮಗಳೂರಿನ ದಟ್ಟಾರಣ್ಯದಲ್ಲಿ ನಿಷೇಧಿತ ಸ್ಯಾಟಟೈಟ್ ಫೋನ್‌ಗಳ ಸಿಗ್ನಲ್ ಪತ್ತೆಯಾಗಿದೆ. ಮೇ 23ರಿಂದ 29ರ ವರೆಗೆ ಮಂಗಳೂರಿನ ಎರಡು ಕಡೆ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಯ ದಟ್ಟಾರಣ್ಯದಲ್ಲಿ ಸ್ಯಾಟಟೈಟ್ ಫೋನ್ ಬಳಕೆ ಮಾಡಿರುವುದನ್ನು ಕೇಂದ್ರ ಗುಪ್ತಚರ ಇಲಾಖೆ ಪತ್ತೆ ಮಾಡಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಈ ಹಿನ್ನೆಲೆಯಲ್ಲಿ ರಾಜ್ಯ ಆಂತರಿಕ ಭದ್ರತಾ ವಿಭಾಗ (ಐಎಸ್‌ಡಿ) ಸ್ಥಳಕ್ಕೆ ತೆರಳಿ ತನಿಖೆ ಕೈಗೆತ್ತಿಕೊಂಡಿದೆ. ಕಳೆದ 10 ದಿನಗಳ ಅವಧಿಯಲ್ಲಿ ನಾಲ್ಕು ಕಡೆಗಳಿಂದ ಸ್ಯಾಟಲೈಟ್ ಫೋನ್ ಸಿಗ್ನಲ್ ಸಂಪರ್ಕಿಸಿರುವುದು ಪತ್ತೆಯಾಗಿದೆ. ಈ ಬಾರಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ

– ಶಿರಸಿಯ ಮಧ್ಯ ಇರುವ ದಟ್ಟಾರಣ್ಯ ಪ್ರದೇಶದಲ್ಲಿ, ಮಂಗಳೂರು ನಗರ ಹೊರಭಾಗದ ನಾಟೆಕಲ್, ಕುಳಾಯಿ ಹಾಗೂ ಚಿಕ್ಕಮಗಳೂರಿನ ಕಡೂರು-ಬೀರೂರು ನಡುವಿನ ಅರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಸಿಗ್ನಲ್ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಈಗ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಸಿಗ್ನಲ್ ಪತ್ತೆಯಾದ ಪ್ರದೇಶಗಳಿಗೆ ತೆರಳಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು