1:06 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಚಡ್ಡಿ ಸುಡೋದ್ರಿಂದ ನಮ್ಮ ವಿಚಾರಧಾರೆಯನ್ನ ಸುಡಲು ಆಗಲ್ಲ: ಕಾಂಗ್ರೆಸ್ ಗೆ ಕುಡಚಿ ಶಾಸಕ ಪಿ.ರಾಜೀವ್ ತಿರುಗೇಟು

06/06/2022, 21:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಂಗ್ರೆಸ್ ಈ ನೆಲದ ವಿಚಾರಧಾರೆಗೆ ಬೆಂಕಿ ಹಚ್ಚುವ ಪ್ರಯತ್ನ ಮಾಡುತ್ತಿದೆ. ಚಡ್ಡಿ ಸುಡೋದ್ರಿಂದ ನಮ್ಮ ವಿಚಾರಧಾರೆಯನ್ನ ಸುಡಲು ಆಗಲ್ಲ ಎಂದು ಕುಡಚಿ ಶಾಸಕ ಪಿ.ರಾಜೀವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸೋಮವಾರ ಮಾಧ್ಯಮ ಜತೆ ಮಾತನಾಡಿದ ಅವರು, ಕಾಂಗ್ರೆಸಿಗರು ಚಡ್ಡಿಗೆ ಬೆಂಕಿ ಹಾಕ್ತಿಲ್ಲ, ಜನರ ಮನಸ್ಸು, ಹೃದಯಕ್ಕೆ ಬೆಂಕಿ ಹಚ್ಚುತ್ತಿದ್ದಾರೆ. ಅವರ ನೈತಿಕತೆ, ಚಿಂತನೆ ಏನೆಂದು ತೋರಿಸುತ್ತಿದೆ ಎಂದರು.

ಕಾಂಗ್ರೆಸ್ ಮನಸ್ಥಿತಿ ಎಷ್ಟು ವಿಕೃತ ಎಂಬುದನ್ನು ಇದು ತೋರಿಸುತ್ತೆ. ಆರ್.ಎಸ್.ಎಸ್. ದೇಶಾಭಿಮಾನ, ರಾಷ್ಟ್ರೀಯತೆ  ಭಾವನೆಯ ಹೃದಯ ಕಟ್ಟುವ ಕೆಲಸ ಮಾಡಿದೆ. ದೂರದಲ್ಲಿ ನಿಂತು ಏನೋ ಮಾತನಾಡೋದಲ್ಲ, ಹತ್ತಿರದಿಂದ ಬಂದು ನೋಡಿ ಎಂದು ಅವರು ಸಲಹೆ ನೀಡಿದರು.

1963ರಲ್ಲಿ ನೆಹರೂ ರಾಜ್ ಪಥ್ ನಲ್ಲಿ ಆರ್.ಎಸ್.ಎಸ್.ಇರಬೇಕು ಎಂದಿದ್ದರು. ಇಂಡಿಯಾ-ಪಾಕಿಸ್ತಾನ ವಿಭಜನೆಯಾದಾಗ ನಿಂತವರು ಸ್ವಯಂ ಸೇವಕರು.ಭಾರತ-ಚೀನಾ ಯುದ್ಧವಾದಾಗ ಯುದ್ಧಭೂಮಿಯಲ್ಲಿ ಸೇವೆ ಮಾಡಿದವರು ಸ್ವಯಂ ಸೇವಕರು ಎಂದವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು