10:21 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಚರಣ್ ರಾಜ್ ರೈ ಕೊಲೆ ಪ್ರಕರಣ: 3 ಮಂದಿ ಪೊಲೀಸ್ ವಶಕ್ಕೆ; ಪ್ರಮುಖ ಆರೋಪಿಗಾಗಿ ಶೋಧ

06/06/2022, 22:00

ಪುತ್ತೂರು(reporterkarnataka.com): ಹಿಂದೂ ಜಾಗರಣ ವೇದಿಕೆ ಮುಖಂಡ ಕಾರ್ತಿಕ್ ಮೇರ್ಲ ಹತ್ಯೆ ಪ್ರಕರಣದ  ಆರೋಪಿ ಚರಣ್ ರಾಜ್ ರೈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಭಾನುವಾರ ಮಧ್ಯಾಹ್ನ ತಂಡವೊಂದು‌ ನಡುರಸ್ತೆಯಲ್ಲಿ ಚರಣ್ ರಾಜ್ ರೈ ಹತ್ಯೆ ನಡೆಸಿತ್ತು. ಕೆಲವು ವರ್ಷಗಳ ಹಿಂದೆ ಕಾರ್ತಿಕ್ ಮೇರ್ಲ ಅವರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಚರಣ್ ರಾಜ್ ಆರೋಪಿಯಾಗಿದ್ದ.

ಇದೀಗ ಚರಣ್ ರಾಜ್ ಕೊಲೆಗೆ ಸಂಬಂಧಿಸಿದಂತೆ

ನಾಲ್ವರು ಆರೋಪಿಗಳಲ್ಲಿ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸ್ ವಶದಲ್ಲಿರುವವರನ್ನು

ಕೆಯ್ಯೂರು ನಿವಾಸಿ ನರ್ಮೇಶ್ ರೈ(29), ನಿತಿಲ್ ಶೆಟ್ಟಿ(23), ವಿಜೇಶ್(22) ಎಂದು ಗುರುತಿಸಲಾಗಿದೆ. ಪ್ರಮುಖ ಆರೋಪಿ ಕಿಶೋರ್ ಪೂಜಾರಿ ಎಂಬಾತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಕಾರ್ತಿಕ್ ಮೇರ್ಲ ಹತ್ಯೆಗೆ ಪ್ರತೀಕಾರವಾಗಿ ಚರಣ್ ರಾಜ್ ಎಂಬಾತನನ್ನು ಕಲ್ಲಡ್ಕದ ಕಿಶೋರ್‍ ಪೂಜಾರಿ ತಂಡವು ಹತ್ಯೆ ಮಾಡಿತ್ತು ಎಂಬ ಆರೋಪವಿದೆ.

ಕಾರ್ಯಾ ಚರಣೆಯಲ್ಲಿ ದಕ್ಷಿಣ ಕನ್ನಡ ಎಸ್‌.ಪಿ ಸೋನಾವಣೆ ಋಷಿಕೇಷ್‌ ಭಗವಾನ್ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ್ ಚಂದ್ರ, ಪೊಲೀಸ್ ಉಪಾಧೀಕ್ಷಕರಾದ ಗಾನ ಪಿ ಕುಮಾರ್, ಸುಳ್ಯ ಠಾಣೆಯ ವೃತ್ತ ನಿರೀಕ್ಷಕರಾದ ನವೀನ್ ಚಂದ್ರ ಜೋಗಿ, ಬೆಳ್ಳಾರೆ ಪಿಎಸ್ಐ ರುಕ್ಮ ನಾಯ್ಕ್, ಸಂಪ್ಯ ಪೊಲೀಸ್‌ ಸಬ್ ಇನ್ಸ್ ಪೆಕ್ಟರ್ ಉದಯ ರವಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು