11:43 PM Friday18 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು…

ಇತ್ತೀಚಿನ ಸುದ್ದಿ

ಎಸ್ ಸಿಐ ವತಿಯಿಂದ ರಾಜಾರಾಮ ಶೆಟ್ಟಿ ಅವರ ಗಟ್ಟಿದ ಬೀಡು ಎಸ್ಟೇಟ್‌ನಲ್ಲಿ ವಿಶ್ವ ಪರಿಸರ ದಿನಾಚರಣೆ

08/06/2022, 08:46

ಮಂಗಳೂರು(reporterkarnataka.com):  ಸೀನಿಯರ್  ಚೇಂಬರ್ ಇಂಟರ್‌ನ್ಯಾಶನಲ್ ಮಂಗಳೂರು ಲೀಜನ್ ವತಿಯಿಂದ ನಗರದ ಕಾವೂರು ಅಂಬಿಕಾ ನಗರದ ರಾಜಾರಾಮ ಶೆಟ್ಟಿ ಅವರ ಗಟ್ಟಿದ ಬೀಡು ಎಸ್ಟೇಟ್‌ನಲ್ಲಿ ಭಾನುವಾರ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. 

ಕಾರ್ಯಕ್ರಮವನ್ನು ರಾಜಾರಾಮ ಶೆಟ್ಟಿಯವರ ತಂದೆ 97ರ ಹರೆಯದ ಕೆ. ಕೆ.ಶೆಟ್ಟಿ ಅವರು ಗಿಡವನ್ನು ಹಸ್ತಾಂತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರಾಷ್ಟ್ರೀಯ ಸಂಯೋಜಕ ಜಿ ಮತ್ತು ಡಿ ಕರ್ನಾಟಕ, ಜಿ ಕೆ ಹರಿಪ್ರಸಾದ್ ರೈ ಉಪಸ್ಥಿತಿಯಲ್ಲಿ ಎಸ್‌ಸಿಐ ಮಂಗಳೂರು ಲೀಜನ್ ಅಧ್ಯಕ್ಷ ಎಸ್.ಎನ್.ಕಿಶೋರ್ ಫೆರ್ನಾಂಡಿಸ್ ಅವರಿಗೆ  ಗಿಡವನ್ನು ಹಸ್ತಾಂತರಿಸಲಾಯಿತು. ಅವರು ಪ್ರಕೃತಿಯ ಮಹತ್ವವನ್ನು ವಿವರಿಸಿದರು ಮತ್ತು ಭೂಮಿ ತಾಯಿಯನ್ನು ಉಳಿಸಲು ಸದಸ್ಯರಿಗೆ ಕರೆ ನೀಡಿದರು. 


ಈ ಸಂದರ್ಭದಲ್ಲಿ ವಿವಿಧ ತಳಿಯ 50 ಗಿಡಗಳನ್ನು ನೆಡಲಾಯಿತು. ಲೀಜನ್ ಐಪಿಪಿ, ಎಸ್ ಎನ್ ಆರ್ ಜಿ ಕೆ ಹರಿಪ್ರಸಾದ್ ರೈ, ಅಧ್ಯಕ್ಷ ಕಿಶೋರ್ ಫೆರ್ನಾಂಡಿಸ್ , ಕಾರ್ಯದರ್ಶಿ ಎಸ್ ಎನ್ ಆರ್ ಫ್ಲಾವಿ ಡಿಮೆಲ್ಲೊ, ಜಂಟಿ ಕಾರ್ಯದರ್ಶಿ ಹಾಗೂ ಪಿ ಆರ್ ಓ ಲತಾ ಕಲ್ಲಡ್ಕ, ಸದಸ್ಯರಾದ ಎಸ್. ಎನ್. ಆರ್. ದತ್ತಾತ್ರೇಯ, ರಾಜಾರಾಂ ಶೆಟ್ಟಿ ಹಾಗೂ ಇತರ ಸದಸ್ಯರು ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು