11:02 PM Tuesday13 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಎಸ್ ಸಿಐ ವತಿಯಿಂದ ರಾಜಾರಾಮ ಶೆಟ್ಟಿ ಅವರ ಗಟ್ಟಿದ ಬೀಡು ಎಸ್ಟೇಟ್‌ನಲ್ಲಿ ವಿಶ್ವ ಪರಿಸರ ದಿನಾಚರಣೆ

08/06/2022, 08:46

ಮಂಗಳೂರು(reporterkarnataka.com):  ಸೀನಿಯರ್  ಚೇಂಬರ್ ಇಂಟರ್‌ನ್ಯಾಶನಲ್ ಮಂಗಳೂರು ಲೀಜನ್ ವತಿಯಿಂದ ನಗರದ ಕಾವೂರು ಅಂಬಿಕಾ ನಗರದ ರಾಜಾರಾಮ ಶೆಟ್ಟಿ ಅವರ ಗಟ್ಟಿದ ಬೀಡು ಎಸ್ಟೇಟ್‌ನಲ್ಲಿ ಭಾನುವಾರ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. 

ಕಾರ್ಯಕ್ರಮವನ್ನು ರಾಜಾರಾಮ ಶೆಟ್ಟಿಯವರ ತಂದೆ 97ರ ಹರೆಯದ ಕೆ. ಕೆ.ಶೆಟ್ಟಿ ಅವರು ಗಿಡವನ್ನು ಹಸ್ತಾಂತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರಾಷ್ಟ್ರೀಯ ಸಂಯೋಜಕ ಜಿ ಮತ್ತು ಡಿ ಕರ್ನಾಟಕ, ಜಿ ಕೆ ಹರಿಪ್ರಸಾದ್ ರೈ ಉಪಸ್ಥಿತಿಯಲ್ಲಿ ಎಸ್‌ಸಿಐ ಮಂಗಳೂರು ಲೀಜನ್ ಅಧ್ಯಕ್ಷ ಎಸ್.ಎನ್.ಕಿಶೋರ್ ಫೆರ್ನಾಂಡಿಸ್ ಅವರಿಗೆ  ಗಿಡವನ್ನು ಹಸ್ತಾಂತರಿಸಲಾಯಿತು. ಅವರು ಪ್ರಕೃತಿಯ ಮಹತ್ವವನ್ನು ವಿವರಿಸಿದರು ಮತ್ತು ಭೂಮಿ ತಾಯಿಯನ್ನು ಉಳಿಸಲು ಸದಸ್ಯರಿಗೆ ಕರೆ ನೀಡಿದರು. 


ಈ ಸಂದರ್ಭದಲ್ಲಿ ವಿವಿಧ ತಳಿಯ 50 ಗಿಡಗಳನ್ನು ನೆಡಲಾಯಿತು. ಲೀಜನ್ ಐಪಿಪಿ, ಎಸ್ ಎನ್ ಆರ್ ಜಿ ಕೆ ಹರಿಪ್ರಸಾದ್ ರೈ, ಅಧ್ಯಕ್ಷ ಕಿಶೋರ್ ಫೆರ್ನಾಂಡಿಸ್ , ಕಾರ್ಯದರ್ಶಿ ಎಸ್ ಎನ್ ಆರ್ ಫ್ಲಾವಿ ಡಿಮೆಲ್ಲೊ, ಜಂಟಿ ಕಾರ್ಯದರ್ಶಿ ಹಾಗೂ ಪಿ ಆರ್ ಓ ಲತಾ ಕಲ್ಲಡ್ಕ, ಸದಸ್ಯರಾದ ಎಸ್. ಎನ್. ಆರ್. ದತ್ತಾತ್ರೇಯ, ರಾಜಾರಾಂ ಶೆಟ್ಟಿ ಹಾಗೂ ಇತರ ಸದಸ್ಯರು ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು