1:07 PM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಪಿಯು ಪಠ್ಯ ಪುಸ್ತಕ ಪರಿಷ್ಕರಣೆ ಇಲ್ಲ; ಹಿಂದಿನ ಪಠ್ಯವನ್ನೇ ಮುಂದುವರೆಸುತ್ತೇವೆ: ಸಚಿವ ಬಿ.ಸಿ. ನಾಗೇಶ್

08/06/2022, 09:16

ಬೆಂಗಳೂರು(reporterkarnataka.com):

ಪಠ್ಯಪುಸ್ತಕರ ಪರಿಷ್ಕರಣೆ ವಿವಾದ ಭುಗಿಲೆದ್ದ ಬಳಿಕ ರಾಜ್ಯ ಬಿಜೆಪಿ ಸರಕಾರ ಎಚ್ಚೆತ್ತುಕೊಂಡಿದೆ. ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಇಲ್ಲ, ಈ ಹಿಂದಿನ ಪಠ್ಯಪುಸ್ತಕವೇ ಯಥಾವತ್ತಾಗಿ ಇರಲಿದೆ ಎಂಬುದಾಗಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟ ಪಡಿಸಿದ್ದಾರೆ.

ರೋಹಿತ್​ ಚಕ್ರತೀರ್ಥ ಅವರ‌ ಸಮಿತಿಯನ್ನೇ ಪಿಯು ಪಠ್ಯಪರಿಷ್ಕರಣೆಗೆ‌ ನೇಮಿಸಲಾಗಿತ್ತು.

ಆದರೆ ಈಗ‌ ಸಮಿತಿಯನ್ನೇ‌ ವಿಸರ್ಜಿಸಲಾಗಿದೆ ಎಂದು ಸಚಿವರು ಹೇಳಿದರು.

ಪಿಯು ಪಠ್ಯ ಪರಿಷ್ಕರಣೆಯಿಂದ ಸರ್ಕಾರ ಹಿಂದೆ ಸರಿದಿದೆ.ದ್ವಿತೀಯ ಪಿಯುಸಿ ಅಧ್ಯಾಯ 4.2 ಪರಿಷ್ಕರಣೆಯಲ್ಲಿ ಹೊಸ ಧರ್ಮಗಳ ಉದಯದ ಬಗ್ಗೆ ಅಂಶಗಳನ್ನು ಸೇರಿಸಲಾಗಿತ್ತು. ಪರಿಷ್ಕರಣೆ ಕಾರ್ಯವನ್ನು ರೋಹಿತ್​​ಗೆ ನೀಡಲಾಗಿತ್ತು. ಆದರೆ, ರೋಹಿತ್ ಸಮಿತಿಯನ್ನು ಈಗಾಗಲೇ ವಿಸರ್ಜಿಸಲಾಗಿದೆ. ಹಾಗಾಗಿ ಪಿಯು ಪರಿಷ್ಕರಣಾ ಸಮಿತಿಯನ್ನು ವಿಸರ್ಜಿಸಲಾಗಿದ್ದು, ಅದರ ವರದಿ ಪಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಶಾಲಾ ಪಠ್ಯಪುಸ್ತಕ ಕುರಿತಂತೆ ಬರಗೂರು ಸಮಿತಿ ನೀಡಿದ್ದ ಬಸವಣ್ಣ ಪಠ್ಯವನ್ನು ಶಾಲಾ ಪಠ್ಯಗಳಲ್ಲಿ ಮುಂದುವರೆಸಲಾಗುತ್ತದೆ. ಅಂಬೇಡ್ಕರ್ ಪಠ್ಯ ಸೇರಿದಂತೆ ಇತರೆ ಲೋಪಗಳನ್ನು ಸರಿ ಪಡಿಸಲಾಗುತ್ತದೆ ಎಂಬುದಾಗಿ ಸ್ಪಷ್ಟ ಪಡಿಸಿದರು.

ಒಂದೇ‌ ಒಂದು ಪಠ್ಯವನ್ನುಪರಿಷ್ಕರಿಸೋಕೆ ಅಂತಾ‌ ಸಮಿತಿ‌ಗೆ ವಹಿಸಲಾಗಿತ್ತು. ಪಿಯು‌ ಪಠ್ಯಪುಸ್ತಕ‌ ಪರಿಷ್ಕರಣೆಗಾಗಿ ಮತ್ತೊಂದು ಸಮಿತಿ‌‌ ನೇಮಿಸಿಲ್ಲ. ಪರಿಷ್ಕರಣೆ ವಿಚಾರ‌ ಎಲ್ಲಿಂದ ಬರಲಿದೆ? ದ್ವಿತೀಯ‌ ಪಿಯು ಪಠ್ಯಪುಸ್ತಕ ಪರಿಷ್ಕರಣೆ ಮಾಡಿಲ್ಲ ಎಂದು ಸಚಿವರು ಸ್ಪಷ್ಟನೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು