1:49 AM Monday25 - August 2025
ಬ್ರೇಕಿಂಗ್ ನ್ಯೂಸ್
Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ

ಆನೆ ದಂತ ಮಾರಾಟ ಯತ್ನ: 5 ಮಂದಿ ಸೆರೆ; ಜೂ 18 ರವರೆಗೆ ನ್ಯಾಯಾಂಗ ಬಂಧನ 

08/06/2022, 13:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಇಲ್ಲಿಗೆ ಸಮೀಪದ ಅಲ್ಲಂಪುರ ಬಳಿ ಆನೆ ದಂತ ಮಾರಾಟಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ .

ಕತ್ಲೆಕಾನ್ ತೋಟದ ಮೇಸ್ತ್ರಿ ಆರ್ . ಶಿವಕುಮಾರ್,ಮಸ್ಕಲ್  ಮರಡಿಯ ಕೆಲಸಗಾರ ಸುಂದರೇಶ್, ತರಿಕೆರೆ ತಾಲ್ಲೂಕು ನಂದಿಬಟ್ಟಲಿನ ಪಿ. ಮಹಾಂತೇಶ್, ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರಿನ  ವೆಲ್ಡರ್ ನೂರ್ ಅಹ್ಮದ್ ,ಚಿತ್ರದುರ್ಗ ತಾಲ್ಲೂಕಿನ  ಪಳಿಕೆಹಳ್ಳಿಯ ಅಂಜನಪ್ಪ ಬಂಧಿತರು.

ಅಲ್ಲಂಪುರ ಪೆಟ್ರೋಲ್ ಬಂಕ್ ಸಮೀಪ ಆನೆ ದಂತ ಮಾರಾಟಕ್ಕೆ ಯತ್ನಿಸಿದಾಗ ಇವರನ್ನು ಬಂಧಿಸಿದ್ದು ಆನೆ ದಂತ ಓಮ್ನಿ ವಾಹನ ವಶಪಡಿಸಿಕೊಳ್ಳಲಾಗಿದೆ .ಇಲ್ಲಿನ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಭದ್ರಾ ವನ್ಯಜೀವಿ ವಲಯದಲ್ಲಿ ಆನೆದಂತ ತಂದಿರುವುದನ್ನು ಖಚಿತಪಡಿಸಿದ್ದಾರೆ.

ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಜೂನ್ 18 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಎರಡನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ ಸಿ ಕೋರ್ಟ್ ಆದೇಶ ನೀಡಿದೆ .

ಇತ್ತೀಚಿನ ಸುದ್ದಿ

ಜಾಹೀರಾತು