7:18 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಯಾವುದೇ ಕಾರಣಕ್ಕೂ ವಿಳಂಬ ಇಲ್ಲ, ಶೀಘ್ರದಲ್ಲೇ ಲೋಕಾಯುಕ್ತರ ನೇಮಕ: ಮುಖ್ಯಮಂತ್ರಿ ಬೊಮ್ಮಾಯಿ ಭರವಸೆ

08/06/2022, 17:42

ಮೈಸೂರು(reporterkarnataka.com):

ಲೋಕಾಯುಕ್ತರ ನೇಮಕಾತಿಗೆ ಸಂಬಂಧಿಸಿದ ಪ್ರಕ್ರಿಯೆ ಈಗಾಗಲೇ ಮುಗಿದಿದ್ದು, ಶೀಘ್ರದಲ್ಲೇ 

ಲೋಕಾಯುಕ್ತ ಸಂಸ್ಥೆಗೆ ಲೋಕಾಯುಕ್ತರನ್ನು ನೇಮಕ ಮಾಡಲಾಗುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.

ಬುಧವಾರ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಲೋಕಾಯುಕ್ತರ ನೇಮಕ ಪ್ರಗತಿಯಲ್ಲಿದೆ. ಇನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡುವುದಿಲ್ಲ, ಶೀಘ್ರವಾಗಿ ನೇಮಕ ಮಾಡುತ್ತೇನೆ ಎಂದರು.

ಜೆಡಿಎಸ್- ಕಾಂಗ್ರೆಸ್ ಆಫರ್‌ ಬಗ್ಗೆ ನಮಗೆ ಗೊತ್ತಿಲ್ಲ.

ರಾಜ್ಯಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಮೂವರು ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ನಮ್ಮ ಪಕ್ಷದ ಮತಗಳನ್ನು ನಮ್ಮ ಅಭ್ಯರ್ಥಿಗಳಿಗೆ ಹಾಕುತ್ತೇವೆ. ಜೆಡಿಎಸ್- ಕಾಂಗ್ರೆಸ್ ನಡುವಿನ ಆಫರ್ ಬಗ್ಗೆ ನಮಗೆ ಸಂಬಂಧಿಸಿದಲ್ಲ. ಆ ವಿಚಾರದ ಬಗ್ಗೆ ನಮಗೆ ಯಾವ ಮಾಹಿತಿಯಿಲ್ಲ ಎಂದರು.

ಮೇಕೆದಾಟು ಯೋಜನೆ ನಿಲ್ಲಿಸಲು ಕೇಂದ್ರ ಸರ್ಕಾರಕ್ಕೆ ಆದೇಶ ನೀಡಬೇಕೆಂದು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿರುವುದು ಖಂಡನೀಯವಾದದ್ದು. ಸುಪ್ರೀಂ ಕೋರ್ಟ್ ಆದೇಶದಂತೆ ಕಾವೇರಿ ನದಿ ನೀರು ಹಂಚಿಕೆ ಪ್ರಾಧಿಕಾರ ರಚನೆಯಾಗಿದೆ. ಯಾವ ಯೋಜನೆಯನ್ನು ಜಾರಿಗೊಳಿಸಬೇಕು, ಯಾವುದನ್ನು ಜಾರಿಗೊಳಿಸಬಾರದು ಎಂದು ಹೇಳುವ ಅಧಿಕಾರ ಪ್ರಾಧಿಕಾರಕ್ಕೆ ಇದೆ. ಈಗಾಗಲೇ ಮೇಕೆದಾಟು ಯೋಜನೆ ವಿಚಾರವಾಗಿ ಪ್ರಾಧಿಕಾರ 16-17 ಸಭೆಗಳನ್ನು ನಡೆಸಿದೆ. ಕರ್ನಾಟಕ ತನಗೆ ಹಂಚಿಕೆ ಮಾಡಿರುವ ನದಿ ನೀರನ್ನು ಬಳಸಿಕೊಳ್ಳಲು ಯಾವುದೇ ಅಡ್ಡಿಯಿಲ್ಲ ಎಂದು ಹೇಳಿದೆ. ಹೀಗಿದ್ದರೂ ಮೇಕೆದಾಟು ಯೋಜನೆ ಬಗ್ಗೆ ತಮಿಳುನಾಡು ತಕರಾರು ತೆಗೆಯುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮೇಕೆದಾಟು ಯೋಜನೆ ವಿಚಾರವಾಗಿ ಈಗಾಗಲೇ ಸುಪ್ರೀಂ ಕೋರ್ಟ್ ನೀಡಿರುವ ನೊಟೀಸ್‌ಗೆ ನಾವು ಸಮರ್ಥವಾದ ಉತ್ತರವನ್ನು ನೀಡಿದ್ದೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು