5:53 AM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಯಾವುದೇ ಕಾರಣಕ್ಕೂ ವಿಳಂಬ ಇಲ್ಲ, ಶೀಘ್ರದಲ್ಲೇ ಲೋಕಾಯುಕ್ತರ ನೇಮಕ: ಮುಖ್ಯಮಂತ್ರಿ ಬೊಮ್ಮಾಯಿ ಭರವಸೆ

08/06/2022, 17:42

ಮೈಸೂರು(reporterkarnataka.com):

ಲೋಕಾಯುಕ್ತರ ನೇಮಕಾತಿಗೆ ಸಂಬಂಧಿಸಿದ ಪ್ರಕ್ರಿಯೆ ಈಗಾಗಲೇ ಮುಗಿದಿದ್ದು, ಶೀಘ್ರದಲ್ಲೇ 

ಲೋಕಾಯುಕ್ತ ಸಂಸ್ಥೆಗೆ ಲೋಕಾಯುಕ್ತರನ್ನು ನೇಮಕ ಮಾಡಲಾಗುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.

ಬುಧವಾರ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಲೋಕಾಯುಕ್ತರ ನೇಮಕ ಪ್ರಗತಿಯಲ್ಲಿದೆ. ಇನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡುವುದಿಲ್ಲ, ಶೀಘ್ರವಾಗಿ ನೇಮಕ ಮಾಡುತ್ತೇನೆ ಎಂದರು.

ಜೆಡಿಎಸ್- ಕಾಂಗ್ರೆಸ್ ಆಫರ್‌ ಬಗ್ಗೆ ನಮಗೆ ಗೊತ್ತಿಲ್ಲ.

ರಾಜ್ಯಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಮೂವರು ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ನಮ್ಮ ಪಕ್ಷದ ಮತಗಳನ್ನು ನಮ್ಮ ಅಭ್ಯರ್ಥಿಗಳಿಗೆ ಹಾಕುತ್ತೇವೆ. ಜೆಡಿಎಸ್- ಕಾಂಗ್ರೆಸ್ ನಡುವಿನ ಆಫರ್ ಬಗ್ಗೆ ನಮಗೆ ಸಂಬಂಧಿಸಿದಲ್ಲ. ಆ ವಿಚಾರದ ಬಗ್ಗೆ ನಮಗೆ ಯಾವ ಮಾಹಿತಿಯಿಲ್ಲ ಎಂದರು.

ಮೇಕೆದಾಟು ಯೋಜನೆ ನಿಲ್ಲಿಸಲು ಕೇಂದ್ರ ಸರ್ಕಾರಕ್ಕೆ ಆದೇಶ ನೀಡಬೇಕೆಂದು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿರುವುದು ಖಂಡನೀಯವಾದದ್ದು. ಸುಪ್ರೀಂ ಕೋರ್ಟ್ ಆದೇಶದಂತೆ ಕಾವೇರಿ ನದಿ ನೀರು ಹಂಚಿಕೆ ಪ್ರಾಧಿಕಾರ ರಚನೆಯಾಗಿದೆ. ಯಾವ ಯೋಜನೆಯನ್ನು ಜಾರಿಗೊಳಿಸಬೇಕು, ಯಾವುದನ್ನು ಜಾರಿಗೊಳಿಸಬಾರದು ಎಂದು ಹೇಳುವ ಅಧಿಕಾರ ಪ್ರಾಧಿಕಾರಕ್ಕೆ ಇದೆ. ಈಗಾಗಲೇ ಮೇಕೆದಾಟು ಯೋಜನೆ ವಿಚಾರವಾಗಿ ಪ್ರಾಧಿಕಾರ 16-17 ಸಭೆಗಳನ್ನು ನಡೆಸಿದೆ. ಕರ್ನಾಟಕ ತನಗೆ ಹಂಚಿಕೆ ಮಾಡಿರುವ ನದಿ ನೀರನ್ನು ಬಳಸಿಕೊಳ್ಳಲು ಯಾವುದೇ ಅಡ್ಡಿಯಿಲ್ಲ ಎಂದು ಹೇಳಿದೆ. ಹೀಗಿದ್ದರೂ ಮೇಕೆದಾಟು ಯೋಜನೆ ಬಗ್ಗೆ ತಮಿಳುನಾಡು ತಕರಾರು ತೆಗೆಯುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮೇಕೆದಾಟು ಯೋಜನೆ ವಿಚಾರವಾಗಿ ಈಗಾಗಲೇ ಸುಪ್ರೀಂ ಕೋರ್ಟ್ ನೀಡಿರುವ ನೊಟೀಸ್‌ಗೆ ನಾವು ಸಮರ್ಥವಾದ ಉತ್ತರವನ್ನು ನೀಡಿದ್ದೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು