9:56 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಅಸ್ಪೃಶ್ಯತೆ ನಿವಾರಣೆಗೆ `ವಿನಯ್ ಸಾಮರಸ್ಯ ಯೋಜನೆ’: ಸಚಿವ ಕೋಟ ಶ್ರೀನಿವಾಸ ಪೂಜಾರಿ

08/06/2022, 20:53

ಉಡುಪಿ(reporterkarnataka.com):  ರಾಜ್ಯದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ ಎಂಬುದನ್ನು ಸರಕಾರ ಒಪ್ಪಿಕೊಂಡಿದೆ. ಅಸ್ಪೃಶ್ಯತೆ ನಿವಾರಣೆ ಮತ್ತು ಸಾಮರಸ್ಯ ಬೆಳೆಸುವ ನಿಟ್ಟಿನಲ್ಲಿ ವಿನಯ್‌ ಸಾಮರಸ್ಯ ಯೋಜನೆಯನ್ನು ಈ ತಿಂಗಳ ಅಂತ್ಯ ಅಥವಾ ಮುಂದಿನ ತಿಂಗಳ ಮೊದಲ ವಾರದಿಂದ ಶುರು ಮಾಡಲಿದ್ದೇವೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಸಹಿತವಾಗಿ ಧಾರ್ಮಿಕ ಮುಖಂಡರನ್ನು ಸೇರಿಸಿಕೊಂಡು ಅಸ್ಪೃಶ್ಯತೆ ನಿವಾರಿಸಲು ದೊಡ್ಡ ಅಭಿಯಾನ ನಡೆಸಲಾಗುವುದು ಎಂದು ಹೇಳಿದ್ದಾರೆ.

ರಾಜ್ಯದ ಗ್ರಾಮ ಪಂಚಾಯಿತಿ ಮತ್ತು ಸ್ಥಳೀಯಾಡಳಿತಗಳಲ್ಲಿ ಸಾಮಾಜಿಕ ನ್ಯಾಯ ಸಮಿತಿ ಮೂಲಕ ಈ ಅಭಿಯಾನ ನಡೆಸಿ, ಅಸ್ಪೃಶ್ಯತೆ ಮುಕ್ತ ಗ್ರಾಮ, ನಗರಾಡಳಿತಗಳಿಗೆ ಇಲಾಖೆಯಿಂದ ಪ್ರೋತ್ಸಾಹ ನೀಡಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು