8:47 PM Monday27 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ಅಪಾಯದ ಗಂಟೆ ಬಾರಿಸುತ್ತಿರುವ ಕುರುಕುಂದಾ ಹಳ್ಳದ ಸೇತುವೆ: ಸಂಕಷ್ಟದಲ್ಲಿ ಸಾವಿರಾರು ರೈತರು

18/06/2021, 07:57

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com 

ಮಸ್ಕಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಕುರುಕುಂದಾ ಗ್ರಾಮದ ಹಳ್ಳದ ಸೇತುವೆಯು ಹೋದ ವರುಷದ ಮಳೆಗಾಲದಲ್ಲೇ ಕಿತ್ತು ಹೋಗಿದ್ದು, ಪ್ರಸ್ತುತ ಮಳೆಗಾಲದಲ್ಲಿ ಅಪಾಯದ ಗಂಟೆ ಬಾರಿಸುತ್ತಿದೆ. 15 ದಿನಗಳ ಹಿಂದೆಯಷ್ಟೇ ಕಿತ್ತು ಹೋದ ಸೇತುವೆ ಮೇಲಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

ಸೇತುವೆಯು ಕೊಳಬಾಳ್ ಮಸ್ಕಿ ಮುಖ್ಯರಸ್ತೆಗೆ ಸಂಪರ್ಕ ಕಲ್ಪಿಸುವ ದಾರಿಯ ಮದ್ಯದ ಕುರುಕುಂದಾ ಗ್ರಾಮದಲ್ಲಿದೆ. ಸೇತುವೆ ಕಿತ್ತು ಹೋಗಿರುವುದರಿಂದ ಹಳ್ಳದ ಆ ಕಡೆಗಿರುವ ಸಾವಿರಾರು ಎಕರೆ ಕೃಷಿ ಭೂಮಿಗೆ ತೆರಳುವ ರೈತರಿಗೆ ಬಹಳ ತೊಂದರೆಯಾಗಿದೆ. ಕೃಷಿ ಚಟುವಟಿಕೆಗಳಿಗೂ ಇದರಿಂದ ಬಹಳಷ್ಟು ತೊಂದರೆಯಾಗಿದೆ.

ಹಿಂದಿನ ಶಾಸಕರ ಪ್ರತಾಪ್ ಗೌಡ ಪಾಟೀಲ್ ಅಧಿಕಾರವಾಧಿಯಲ್ಲಿ ಸೇತುವೆ ಕಿತ್ತು ಹೋಗಿದ್ದು, ನೂತನ ಶಾಸಕ ಬಸನಗೌಡ ತುರುವಿಹಾಳ ಇದನ್ನು ದುರಸ್ತಿಪಡಿಸುವ ಆಶಾಭಾವನೆಯನ್ನು ಇಲ್ಲಿನ ರೈತರು ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು