4:06 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ರಾಷ್ಟ್ರಪತಿ ಚುನಾವಣೆ: ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಕಾರ್ಯತಂತ್ರ

10/06/2022, 20:21

ಹೊಸದಿಲ್ಲಿ(reporterkarnataka.com): ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೊಸ ಕಾರ್ಯತಂತ್ರ ರೂಪಿಸಲು ಸಿದ್ಧತೆ ನಡೆಸಿದೆ. ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಹೊಸ ತಂತ್ರವನ್ನು ರೂಪಿಸುತ್ತಿದ್ದಾರೆ ಎನ್ನಲಾಗಿದೆ. ಇತರ ರಾಜಕೀಯ ಪಕ್ಷಗಳ ಮುಖ್ಯಸ್ಥರನ್ನು ಭೇಟಿ ಮಾಡಿರುವ ಕಾಂಗ್ರೆಸ್‌ ನಾಯಕಿ ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಚರ್ಚಿಸಿದ್ದಾರೆ. ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಸಿಪಿಐ(ಎಂ) ನಾಯಕ ಸೀತಾರಾಂ ಯೆಚೂರಿ ಸೇರಿದಂತೆ ಪ್ರತಿಪಕ್ಷ ನಾಯಕರನ್ನು ಸಂಪರ್ಕಿಸಿ ರಾಷ್ಟ್ರಪತಿ ಅಭ್ಯರ್ಥಿಗಳ ವಿಚಾರವಾಗಿ ಚರ್ಚಿಸಿದ್ದಾರೆ ಎನ್ನಲಾಗಿದೆ.

ವಿರೋಧ ಪಕ್ಷಗಳೊಂದಿಗೆ ಮಾತುಕತೆ ನಡೆಸಿ ಮುಂದಿನ ರಾಷ್ಟ್ರಪತಿ ಅಭ್ಯರ್ಥಿಯಾಗಿ ಯಾರನ್ನು ನಾಮನಿರ್ದೇಶನ ಮಾಡಬೇಕು ಎಂಬ ಬಗ್ಗೆ ಒಮ್ಮತ ಮೂಡಿಸಲು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸೋನಿಯಾ ಗಾಂಧಿ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರೊಬ್ಬರು ಪ್ರತಿಕ್ರಿಯಿಸಿದ್ದು “ಎನ್‌ಡಿಎಯೇತರ ಹಾಗೂ ಯುಪಿಎಯೇತರ ಪಕ್ಷಗಳ ಮನಸ್ಥಿತಿಯನ್ನು ಕಂಡು ಹಿಡಿಯುವ ಕೆಲಸವನ್ನು ಕಾಂಗ್ರೆಸ್‌ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡಲಾಗಿದೆ. ಅವರು ವಿರೋಧ ಪಕ್ಷದ ನಾಯಕರೊಂದಿಗೆ ಸಭೆ ನಡೆಸಿ ಅಭ್ಯರ್ಥಿಗಳ ಸಂಭಾವ್ಯ ಹೆಸರುಗಳನ್ನು ಕಂಡುಹಿಡಿಯುತ್ತಾರೆ” ಎಂದಿರುವ ಕುರಿತು ಮೂಲಗಳು ವರದಿ ಮಾಡಿವೆ.

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ಅವರ ಅಧಿಕಾರಾವಧಿ ಜುಲೈ 24ರಂದು ಕೊನೆಗೊಳ್ಳಲಿದ್ದು ನೂತನ ರಾಷ್ಟ್ರಪತಿ ಆಯ್ಕೆಗೆ ಜುಲೈ 18ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಗುರುವಾರ ಘೋಷಿಸಿದೆ. ಚುನಾವಣೆಯಲ್ಲಿ ಒಟ್ಟು 4,809 ಮತದಾರರು ಮತ ಚಲಾಯಿಸಲಿದ್ದಾರೆ. ಯಾವುದೇ ರಾಜಕೀಯ ಪಕ್ಷವು ತನ್ನ ಸದಸ್ಯರಿಗೆ ವಿಪ್ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು