8:19 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ರಾಷ್ಟ್ರಪತಿ ಚುನಾವಣೆ: ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಕಾರ್ಯತಂತ್ರ

10/06/2022, 20:21

ಹೊಸದಿಲ್ಲಿ(reporterkarnataka.com): ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೊಸ ಕಾರ್ಯತಂತ್ರ ರೂಪಿಸಲು ಸಿದ್ಧತೆ ನಡೆಸಿದೆ. ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಹೊಸ ತಂತ್ರವನ್ನು ರೂಪಿಸುತ್ತಿದ್ದಾರೆ ಎನ್ನಲಾಗಿದೆ. ಇತರ ರಾಜಕೀಯ ಪಕ್ಷಗಳ ಮುಖ್ಯಸ್ಥರನ್ನು ಭೇಟಿ ಮಾಡಿರುವ ಕಾಂಗ್ರೆಸ್‌ ನಾಯಕಿ ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಚರ್ಚಿಸಿದ್ದಾರೆ. ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಸಿಪಿಐ(ಎಂ) ನಾಯಕ ಸೀತಾರಾಂ ಯೆಚೂರಿ ಸೇರಿದಂತೆ ಪ್ರತಿಪಕ್ಷ ನಾಯಕರನ್ನು ಸಂಪರ್ಕಿಸಿ ರಾಷ್ಟ್ರಪತಿ ಅಭ್ಯರ್ಥಿಗಳ ವಿಚಾರವಾಗಿ ಚರ್ಚಿಸಿದ್ದಾರೆ ಎನ್ನಲಾಗಿದೆ.

ವಿರೋಧ ಪಕ್ಷಗಳೊಂದಿಗೆ ಮಾತುಕತೆ ನಡೆಸಿ ಮುಂದಿನ ರಾಷ್ಟ್ರಪತಿ ಅಭ್ಯರ್ಥಿಯಾಗಿ ಯಾರನ್ನು ನಾಮನಿರ್ದೇಶನ ಮಾಡಬೇಕು ಎಂಬ ಬಗ್ಗೆ ಒಮ್ಮತ ಮೂಡಿಸಲು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸೋನಿಯಾ ಗಾಂಧಿ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರೊಬ್ಬರು ಪ್ರತಿಕ್ರಿಯಿಸಿದ್ದು “ಎನ್‌ಡಿಎಯೇತರ ಹಾಗೂ ಯುಪಿಎಯೇತರ ಪಕ್ಷಗಳ ಮನಸ್ಥಿತಿಯನ್ನು ಕಂಡು ಹಿಡಿಯುವ ಕೆಲಸವನ್ನು ಕಾಂಗ್ರೆಸ್‌ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡಲಾಗಿದೆ. ಅವರು ವಿರೋಧ ಪಕ್ಷದ ನಾಯಕರೊಂದಿಗೆ ಸಭೆ ನಡೆಸಿ ಅಭ್ಯರ್ಥಿಗಳ ಸಂಭಾವ್ಯ ಹೆಸರುಗಳನ್ನು ಕಂಡುಹಿಡಿಯುತ್ತಾರೆ” ಎಂದಿರುವ ಕುರಿತು ಮೂಲಗಳು ವರದಿ ಮಾಡಿವೆ.

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ಅವರ ಅಧಿಕಾರಾವಧಿ ಜುಲೈ 24ರಂದು ಕೊನೆಗೊಳ್ಳಲಿದ್ದು ನೂತನ ರಾಷ್ಟ್ರಪತಿ ಆಯ್ಕೆಗೆ ಜುಲೈ 18ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಗುರುವಾರ ಘೋಷಿಸಿದೆ. ಚುನಾವಣೆಯಲ್ಲಿ ಒಟ್ಟು 4,809 ಮತದಾರರು ಮತ ಚಲಾಯಿಸಲಿದ್ದಾರೆ. ಯಾವುದೇ ರಾಜಕೀಯ ಪಕ್ಷವು ತನ್ನ ಸದಸ್ಯರಿಗೆ ವಿಪ್ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು