4:58 PM Saturday5 - July 2025
ಬ್ರೇಕಿಂಗ್ ನ್ಯೂಸ್
ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು

ಇತ್ತೀಚಿನ ಸುದ್ದಿ

ಕಂಪ್ಯೂಟರ್ ಪರೀಕ್ಷೆ ಪಾಸಾಗಿಲ್ಲವೇ?: ಹಾಗಾದರೆ ಸರಕಾರಿ ಸಿಬ್ಬಂದಿಗಳಿಗಿಲ್ಲ ಪ್ರಮೋಶನ್, ವಾರ್ಷಿಕ ವೇತನ ಬಡ್ತಿ

11/06/2022, 09:21

ಬೆಂಗಳೂರು(reporterkarnataka.com): ನಿಮ್ಮ ಹುದ್ದೆ ದೊಡ್ಡದೇ? ಸಿಕ್ಕಾಪಟ್ಟೆ ವೇತನವಿದೆಯೇ? ಕಂಪ್ಯೂಟರ್ ಗೊತ್ತಿಲ್ಲವೇ? 

ಸಹಾಯಕರನ್ನಿಟ್ಟುಕೊಂಡು ಕೆಲಸ ಮಾಡಿಸುತ್ತಿದ್ದೀರಾ? ಹಾಗಾದರೆ ಸರಕಾರದ ಹೊಸ ಆದೇಶದ ಪ್ರಕಾರ ನಿಮಗಿನ್ನು ಕಷ್ಟದ ದಿನಗಳು ಎದುರಾಗಲಿದೆ.

ಯಾಕೆಂದರೆ ಸರಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಕಡ್ಡಾಯವಾಗಿ ಉತ್ತೀರ್ಣರಾಗಬೇಕು, ಇಲ್ಲವಾದಲ್ಲಿ ಮುಂಬಡ್ತಿ, ವಾರ್ಷಿಕ ವೇತನ ಬಡ್ತಿಗೆ ಅರ್ಹರಾಗಿರುವುದಿಲ್ಲ ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಸರ್ಕಾರಿ ಅಧಿಕಾರಿಗಳು, ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ತೆಗೆದುಕೊಳ್ಳದಿರುವ ಬಗ್ಗೆ ಸರ್ಕಾರ ಕ್ರಮ ಕೈಗೊಂಡಿದ್ದು, ಪರೀಕ್ಷೆ ತೆಗೆದುಕೊಳ್ಳದ ಅಧಿಕಾರಿಗಳು ಮತ್ತು ನೌಕರರ ಮಾಹಿತಿ ಕಲೆಹಾಕಿ ಸರ್ಕಾರಕ್ಕೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಲಾಗಿದೆ.

ಸುಮಾರು 5.40 ಲಕ್ಷ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಕಡ್ಡಾಯವಾಗಿ ಉತ್ತೀರ್ಣರಾಗಬೇಕು ಎಂದು ಸರ್ಕಾರ ಆದೇಶ ನೀಡಿದ್ದು, ಸುಮಾರು 2.50 ಲಕ್ಷಕ್ಕೂ ಅಧಿಕ ಅಧಿಕಾರಿಗಳು ಮತ್ತು ನೌಕರರು ಬರೆದ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ 1,73,500 ಅಧಿಕಾರಿಗಳು, ನೌಕರರು ಉತ್ತೀರ್ಣರಾಗಿದ್ದಾರೆ.

ಇನ್ನೂ ಸುಮಾರು 3.5 ಲಕ್ಷ ಸರ್ಕಾರಿ ನೌಕರರು ಪರೀಕ್ಷೆ ತೆಗೆದುಕೊಳ್ಳಬೇಕಾಗಿದ್ದು, ಸರ್ಕಾರಿ ಅಧಿಕಾರಿಗಳು, ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಮಾಡಿಕೊಳ್ಳಲು ಡಿಸೆಂಬರ್ 31 ರ ವರೆಗೆ ಗಡುವು ನೀಡಲಾಗಿದೆ. ಈ ಅವಧಿಯೊಳಗೆ ಉತ್ತೀರ್ಣರಾಗದ ನೌಕರರು ಮತ್ತು ಅಧಿಕಾರಿಗಳು ಮುಂಬಡ್ತಿ, ವಾರ್ಷಿಕ ವೇತನ ಬಡ್ತಿಗೆ ಅರ್ಹರಾಗಿರುವುದಿಲ್ಲ ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು