3:14 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಪಚ್ಚನಾಡಿ: ಪೌರ ಕಾರ್ಮಿಕರಿಗೆ ಮೀಸಲಿಟ್ಟ ಸ್ಥಳದಲ್ಲಿ ಅಕ್ರಮ ಮನೆ ನಿರ್ಮಾಣ; ತೆರವಿಗೆ ಸ್ಥಳೀಯ ಕಾರ್ಪೊರೇಟರ್ ಪಟಲಾಂ ಅಡ್ಡಿ!!

11/06/2022, 14:09

ಮಂಗಳೂರು(reporterkarnataka.com): 

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಬಳಿ ಪೌರ ಕಾರ್ಮಿಕರಿಗೆ ಮೀಸಲಿಟ್ಟ ಸ್ಥಳದಲ್ಲಿ ಅಕ್ರಮ ಮನೆ ನಿರ್ಮಿಸಿರುವುದನ್ನು ತೆರವುಗೊಳಿಸಲು ತೆರಳಿದ ಪಾಲಿಕೆ ಅಧಿಕಾರಿಗಳಿಗೆ ತಡೆಯೊಡ್ಡಲಾಗಿದೆ. ಅಕ್ರಮ ಮನೆಗಳ ತೆರವಿಗೆ ಪಾಲಿಕೆ ಕಮಿಷನರ್ ಆದೇಶ ಪತ್ರದೊಂದಿಗೆ ಅಧಿಕಾರಿಗಳು ಪೊಲೀಸ್ ರಕ್ಷಣೆಯೊಂದಿಗೆ ತೆರಳಿದರೂ ತೆರವು ಕಾರ್ಯಾಚರಣೆ ನಡೆದಿಲ್ಲ. 

ಪಾಲಿಕೆಯ ಸದಸ್ಯೆ ಸಂಗಿತಾ ಆರ್.ನಾಯಕ್ 
ಹಾಗೂ ಸ್ಥಳಿಯರು ತೆರವು ಮಾಡಲು ತಡೆಯೊಡ್ಡಿದ್ದಾರೆ ಎನ್ನಲಾಗಿದೆ. ಬೆಳಗ್ಗೆ 7 ಗಂಟೆಗೆ ಕಾರ್ಯಾಚರಣೆಗೆ ಸಿದ್ಧತೆ ನಡೆಸಿದ್ದರೂ ಈ ವಿಷಯ ಗೊತ್ತಾಗಿ ಮನೆಯೊಳಗೆ ಮಹಿಳೆಯರು ಸೇರಿದಂತೆ ಮನೆ ಮಂದಿಯನ್ನು ಮಲಗಿಸಿ ಕಾರ್ಯಾಚರಣೆಗೆ ಅಡ್ಡಿಪಡಿಸಲಾಗಿದೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಪ್ರದೇಶದಲ್ಲಿ ಪೌರ ಕಾರ್ಮಿಕರಿಗೆ ಮೀಸಲಿಟ್ಟ ಭೂಮಿಯಲ್ಲಿ 

ಕಾರ್ಪೊರೇಟರ್ ನೆರವಿನಿಂದ ಅಕ್ರಮವಾಗಿ ಮನೆ ನಿರ್ಮಿಸಲಾಗಿದೆ. ಇದರಲ್ಲಿ ಒಂದು ಮನೆಯ ಗೃಹಪ್ರವೇಶ ಕೂಡ ಆಗಿದೆ.

ಇಲ್ಲಿ ಸುಮಾರು 2 ಎಕರೆ ಭೂಮಿ ಇದ್ದು, ಈ ಹಿಂದೆ ಅದರಲ್ಲಿ ಕೆಲವು ಪೌರ ಕಾರ್ಮಿಕರು ಸಕ್ರಮವಾಗಿ ಮನೆ ನಿರ್ಮಿಸಿ ವಾಸಿಸುತ್ತಿದ್ದಾರೆ. ಉಳಿದ ಶೇ. 75ರಷ್ಟು ಖಾಲಿ ನಿವೇಶನವಿದ್ದು, ಪೌರ ಕಾರ್ಮಿಕರಿಗೆ ಮೀಸಲಿಡಲಾಗಿದೆ. ಆದರೆ ಪೌರ ಕಾರ್ಮಿಕರಿಗೆ ಮೀಸಲಿಟ್ಟ ಈ ಜಾಗದಲ್ಲಿ ಈ ಹಿಂದೆ 2020 ರಲ್ಲಿ ಅಪರಿಚಿತರು ಅಕ್ರಮವಾಗಿ 9 ಮನೆ ನಿರ್ಮಾಣಕ್ಕೆ ಅಡಿಪಾಯ ನಿರ್ಮಿಸುವಾಗ ಸ್ಥಳೀಯರು ಪಾಲಿಕೆಯ ಗಮನಕ್ಕೆ ತಂದಿದ್ದರು. ಇದೀಗ ಅಲ್ಲಿ ಒಂದು ಮನೆ ಗೃಹ ಪ್ರವೇಶವಾಗಿ, 10 ಮನೆಗಳು ಪೂರ್ಣಗೊಳ್ಳುವ ಹಂತದಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು