3:58 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಪಚ್ಚನಾಡಿ: ಪೌರ ಕಾರ್ಮಿಕರಿಗೆ ಮೀಸಲಿಟ್ಟ ಸ್ಥಳದಲ್ಲಿ ಅಕ್ರಮ ಮನೆ ನಿರ್ಮಾಣ; ತೆರವಿಗೆ ಸ್ಥಳೀಯ ಕಾರ್ಪೊರೇಟರ್ ಪಟಲಾಂ ಅಡ್ಡಿ!!

11/06/2022, 14:09

ಮಂಗಳೂರು(reporterkarnataka.com): 

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಬಳಿ ಪೌರ ಕಾರ್ಮಿಕರಿಗೆ ಮೀಸಲಿಟ್ಟ ಸ್ಥಳದಲ್ಲಿ ಅಕ್ರಮ ಮನೆ ನಿರ್ಮಿಸಿರುವುದನ್ನು ತೆರವುಗೊಳಿಸಲು ತೆರಳಿದ ಪಾಲಿಕೆ ಅಧಿಕಾರಿಗಳಿಗೆ ತಡೆಯೊಡ್ಡಲಾಗಿದೆ. ಅಕ್ರಮ ಮನೆಗಳ ತೆರವಿಗೆ ಪಾಲಿಕೆ ಕಮಿಷನರ್ ಆದೇಶ ಪತ್ರದೊಂದಿಗೆ ಅಧಿಕಾರಿಗಳು ಪೊಲೀಸ್ ರಕ್ಷಣೆಯೊಂದಿಗೆ ತೆರಳಿದರೂ ತೆರವು ಕಾರ್ಯಾಚರಣೆ ನಡೆದಿಲ್ಲ. 

ಪಾಲಿಕೆಯ ಸದಸ್ಯೆ ಸಂಗಿತಾ ಆರ್.ನಾಯಕ್ 
ಹಾಗೂ ಸ್ಥಳಿಯರು ತೆರವು ಮಾಡಲು ತಡೆಯೊಡ್ಡಿದ್ದಾರೆ ಎನ್ನಲಾಗಿದೆ. ಬೆಳಗ್ಗೆ 7 ಗಂಟೆಗೆ ಕಾರ್ಯಾಚರಣೆಗೆ ಸಿದ್ಧತೆ ನಡೆಸಿದ್ದರೂ ಈ ವಿಷಯ ಗೊತ್ತಾಗಿ ಮನೆಯೊಳಗೆ ಮಹಿಳೆಯರು ಸೇರಿದಂತೆ ಮನೆ ಮಂದಿಯನ್ನು ಮಲಗಿಸಿ ಕಾರ್ಯಾಚರಣೆಗೆ ಅಡ್ಡಿಪಡಿಸಲಾಗಿದೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಪ್ರದೇಶದಲ್ಲಿ ಪೌರ ಕಾರ್ಮಿಕರಿಗೆ ಮೀಸಲಿಟ್ಟ ಭೂಮಿಯಲ್ಲಿ 

ಕಾರ್ಪೊರೇಟರ್ ನೆರವಿನಿಂದ ಅಕ್ರಮವಾಗಿ ಮನೆ ನಿರ್ಮಿಸಲಾಗಿದೆ. ಇದರಲ್ಲಿ ಒಂದು ಮನೆಯ ಗೃಹಪ್ರವೇಶ ಕೂಡ ಆಗಿದೆ.

ಇಲ್ಲಿ ಸುಮಾರು 2 ಎಕರೆ ಭೂಮಿ ಇದ್ದು, ಈ ಹಿಂದೆ ಅದರಲ್ಲಿ ಕೆಲವು ಪೌರ ಕಾರ್ಮಿಕರು ಸಕ್ರಮವಾಗಿ ಮನೆ ನಿರ್ಮಿಸಿ ವಾಸಿಸುತ್ತಿದ್ದಾರೆ. ಉಳಿದ ಶೇ. 75ರಷ್ಟು ಖಾಲಿ ನಿವೇಶನವಿದ್ದು, ಪೌರ ಕಾರ್ಮಿಕರಿಗೆ ಮೀಸಲಿಡಲಾಗಿದೆ. ಆದರೆ ಪೌರ ಕಾರ್ಮಿಕರಿಗೆ ಮೀಸಲಿಟ್ಟ ಈ ಜಾಗದಲ್ಲಿ ಈ ಹಿಂದೆ 2020 ರಲ್ಲಿ ಅಪರಿಚಿತರು ಅಕ್ರಮವಾಗಿ 9 ಮನೆ ನಿರ್ಮಾಣಕ್ಕೆ ಅಡಿಪಾಯ ನಿರ್ಮಿಸುವಾಗ ಸ್ಥಳೀಯರು ಪಾಲಿಕೆಯ ಗಮನಕ್ಕೆ ತಂದಿದ್ದರು. ಇದೀಗ ಅಲ್ಲಿ ಒಂದು ಮನೆ ಗೃಹ ಪ್ರವೇಶವಾಗಿ, 10 ಮನೆಗಳು ಪೂರ್ಣಗೊಳ್ಳುವ ಹಂತದಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು