4:11 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಪಚ್ಚನಾಡಿಯಲ್ಲಿ ಅಕ್ರಮ ಮನೆ ತೆರವಿಗೆ ಅಡ್ಡಿಪಡಿಸಿದವರ ವಿರುದ್ಧ ಪ್ರಕರಣ ದಾಖಲು: ಪಾಲಿಕೆ ಕಮಿಷನರ್ ಅಕ್ಷಯ್ ಶ್ರೀಧರ್

11/06/2022, 15:25

ಮಂಗಳೂರು(reporterkarnataka.com):  ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಬಳಿ ಪೌರ ಕಾರ್ಮಿಕರಿಗೆ ಮೀಸಲಿಟ್ಟ ಸ್ಥಳದಲ್ಲಿ ಅಕ್ರಮವಾಗಿ ನಿರ್ಮಿಸಿದ ಮನೆ ತೆರವುಗೊಳಿಸಲು ಅಡ್ಡಿಪಡಿಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಪಾಲಿಕೆ ಕಮಿಷನರ್ ಅಕ್ಷಯ್ ಶ್ರೀಧರ್ ಹೇಳಿದರು.

ರಿಪೋರ್ಟರ್ ಕರ್ನಾಟಕ ಜತೆ ಶನಿವಾರ ಮಾತನಾಡಿದ ಅವರು, ಪಾಲಿಕೆ ಅಧಿಕಾರಿಗಳ ಕರ್ತವ್ಯಕ್ಕೆ ಯಾರೆಲ್ಲ ಅಡ್ಡಿಪಡಿಸಿದ್ದಾರೆಯೇ ಅವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ನಮ್ಮ ಅಧಿಕಾರಿಗಳು ಈಗಾಗಲೇ ಪೊಲೀಸ್ ಠಾಣೆಗೆ ತೆರಳಿದ್ದಾರೆ ಎಂದರು.

ತೆರವಿಗೆ ಅಡ್ಡಿಪಡಿಸಿದವರಲ್ಲಿ ಸ್ಥಳೀಯ ಕಾರ್ಪೊರೇಟರ್ ಸಂಗೀತಾ ನಾಯಕ್ ಅವರು ಸೇರಿರುವ ಕುರಿತು ಕಮಿಷನರ್ ಅವರ ಗಮನಕ್ಕೆ ತಂದಾಗ, ಕಾರ್ಪೊರೇಟರ್ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದು. ಪೊಲೀಸ್ ಕಮಿಷನರ್ ಜತೆ ಮಾತನಾಡಿ ಒಂದು ವಾರದೊಳಗೆ ಮತ್ತೆ ತೆರವು ಕಾರ್ಯಾಚರಣೆ ನಡೆಸಲಾಗುವುದು ಎಂದು ಅವರು ನುಡಿದರು.

ಪಾಲಿಕೆಯ ಪೌರ ಕಾರ್ಮಿಕರಿಗೆ ಮೀಸಲಿಟ್ಟ ನಿವೇಶನದಲ್ಲಿ ಅಕ್ರಮ ಮನೆ ನಿರ್ಮಿಸಿರುವುದು ಸರಿಯಲ್ಲ ಎಂದು ಪಾಲಿಕೆ ಕಮಿಷನರ್ ಹೇಳಿದರು.

ಮನೆ ನಿರ್ಮಿಸಿರುವುದನ್ನು ತೆರವುಗೊಳಿಸಲು ಶನಿವಾರ ಜೇಸಿಬಿ ಜತೆ ತೆರಳಿದ ಪಾಲಿಕೆ ಅಧಿಕಾರಿಗಳಿಗೆ ತಡೆಯೊಡ್ಡಲಾಗಿತ್ತು.

ಅಕ್ರಮ ಮನೆಗಳ ತೆರವಿಗೆ ಪಾಲಿಕೆ ಕಮಿಷನರ್ ಆದೇಶ ಪತ್ರದೊಂದಿಗೆ ಅಧಿಕಾರಿಗಳು ಪೊಲೀಸ್ ರಕ್ಷಣೆಯೊಂದಿಗೆ ತೆರಳಿದರೂ ತೆರವು ಕಾರ್ಯಾಚರಣೆ ನಡೆದಿಲ್ಲ. ಇದು ಪಾಲಿಕೆಗೆ ದೊಡ್ಡ ಹಿನ್ನಡೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು