5:04 AM Friday13 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಪಚ್ಚನಾಡಿ ಅಕ್ರಮ ಮನೆಗಳ ವಾರದೊಳಗೆ ತೆರವು ಮಾಡದಿದ್ದರೆ ತ್ಯಾಜ್ಯ ವಿಲೇವಾರಿ ಸ್ಥಗಿತ: ಪಾಲಿಕೆಗೆ ದಲಿತ ಮುಖಂಡರ ಎಚ್ಚರಿಕೆ

11/06/2022, 17:10

ಮಂಗಳೂರು(reporterkarnataka.com):  ನಗರದ ಪಚ್ಚನಾಡಿಯಲ್ಲಿ ಪೌರ ಕಾರ್ಮಿಕರಿಗೆ ಮೀಸiಲಿಟ್ಟ ನಿವೇಶನದಲ್ಲಿ ಅಕ್ರಮವಾಗಿ ನಿರ್ಮಿಸಿದ ಮನೆಗಳನ್ನು ಒಂದು ವಾರದೊಳಗೆ ತೆರವು ಮಾಡದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ದಲಿತ ಸಂಘರ್ಷ ಸಮಿತಿಯ ಮುಖಂಡ ಎಸ್.ಪಿ.ಆನಂದ್ ಎಚ್ಚರಿಕೆ ನೀಡಿದ್ದಾರೆ.

ರಿಪೋರ್ಟರ್ ಕರ್ನಾಟಕ ಜತೆ ಶನಿವಾರ ಮಾತನಾಡಿದ ಅವರು, ವಾರದೊಳಗೆ ತೆರವು ಮಾಡದೇ ಇದ್ದಲ್ಲಿ ಮುಂದಿನ ವಾರ ಪಾಲಿಕೆಯ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರು (ಆ್ಯಂಟೋನಿ ತ್ಯಾಜ್ಯ ವಿಲೇವಾರಿಯ ಕಾರ್ಮಿಕರು ಸೇರಿದಂತೆ) ಕೆಲಸ ಸ್ಥಗಿತ ಮಾಡಿ ಉಗ್ರ ಹೋರಾಟ ನಡೆಸುವುದಾಗಿ ಹೇಳಿದರು.

4 ಎಕರೆ ಸ್ಥಳ ಸರಿ ಸುಮಾರು 200 ಪೌರ ಕಾರ್ಮಿಕರಿಗೆ ತಲಾ2 ಸೆಂಟ್ ನ ಹಾಗೆ ಮೀಸಲಿರಿಸಿದ ಸ್ಥಳ.  ಇತೀಚೆಗೆ ಸಹ ಪರವಾನಿಗೆ ಇಲ್ಲದೇ ಹಲವರು ಅತಿಕ್ರಮಿಸಿ ಮನೆ ನಿರ್ಮಾಣವಾಗುತ್ತಿದ್ದಾಗ

ಇದರ ಬಗ್ಗೆ ದಲಿತ ಸಂಘರ್ಷ ಸಮಿತಿ  ಹಾಗೂ ಪೌರ ಕಾರ್ಮಿಕರ ಸಂಘ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರಿಂದ ಮಂಗಳೂರು ಮಹಾ ನಗರ ಪಾಲಿಕೆಯ ಆಯುಕ್ತರ ಆದೇಶದ ಮೇರೆಗೆ ನಗರ ಪಾಲಿಕೆಯ ನಗರ ಯೋಜನೆ  ಅಧಿಕಾರಿಗಳು ಸ್ಥಳೀಯ ಪೋಲಿಸ್ ಇಲಾಖೆಯ ಸಹಾಕಾರದೊಂದಿಗೆ ತೆರವು ಮಾಡಲು ಮುಂದಾಗಿದ್ದರು. ಆದರೆ ಅಲ್ಲಿನ ಕಾರ್ಪೊರೇಟರ್ ಸಂಗೀತಾ ಆರ್. ನಾಯಕ್ ಹಾಗೂ ಅವರ ಪತಿ ರವಿಂದ್ರ ನಾಯಕ್  ಹಾಗೂ ಸ್ಥಳೀಯ ಕೆಲವರು ತೆರವು ಮಾಡಲು ತಡೆಮಾಡಿದ್ದಾರೆ. ಪಾಲಿಕೆ ತೆರವಿಗೆ ಇನ್ನೊಂದು ವಾರ ಗಡುವು ನೀಡುತ್ತೇವೆ. ತೆರವು ಮಾಡದೇ ಇದ್ದಲ್ಲಿ ಮುಂದಿನ ವಾರ ಪಾಲಿಕೆಯ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರು (ಆ್ಯಂಟೋನಿ ತ್ಯಾಜ್ಯ ವಿಲೇವಾರಿಯ ಕಾರ್ಮಿಕರು ಸೇರಿದಂತೆ) ಕೆಲಸ ಸ್ಥಗಿತ ಮಾಡಿ  ಉಗ್ರ ಹೋರಟ ನಡೆಸುವುದಾಗಿ ಆನಂದ್ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು