1:53 AM Friday12 - December 2025
ಬ್ರೇಕಿಂಗ್ ನ್ಯೂಸ್
ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ

ಇತ್ತೀಚಿನ ಸುದ್ದಿ

ಇನ್ನಷ್ಟು ಕೆರೆಗಳ ಅಭಿವೃದ್ಧಿಗೆ ಯೋಜನೆ ತಯಾರಿ:  ಶಾಸಕ ವೇದವ್ಯಾಸ್ ಕಾಮತ್ 

11/06/2022, 23:22

ಮಂಗಳೂರು(reporterkarnataka.com): ನಗರದಲ್ಲಿ ಅಜೀರ್ಣಾವಸ್ಥೆಯಲ್ಲಿದ್ದ ಅನೇಕ ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದ್ದು, 

ಇನ್ನಷ್ಟು ಕೆರೆಗಳ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು.

ಮಂಗಳೂರು ಮಹಾನಗರ ಪಾಲಿಕೆಯ ಸೆಂಟ್ರಲ್ ವಾರ್ಡಿನ ಬಜಿಲಕೇರಿ ಶ್ರೀ ಮುಖ್ಯಪ್ರಾಣ ದೇವಸ್ಥಾನದ ಕೆರೆಯ ನವೀಕರಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಬಜಿಲಕೇರಿ ಶ್ರೀ ಮುಖ್ಯಪ್ರಾಣ ದೇವಸ್ಥಾನಕ್ಕೆ ಸಂಬಂಧಪಟ್ಟ ಕೆರೆಯ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಳಿಸಲಾಗಿದೆ. ಧಾರ್ಮಿಕತೆಯ ಭಾಗವಾಗಿರುವ ಪುರಾತನ ಕೆರೆಗಳನ್ನು ಅಭಿವೃದ್ಧಿಪಡಿಸಿ ಸಂರಕ್ಷಿಸುವ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು ಹೇಳಿದರು.

ಮಂಗಳೂರು ನಗರದಲ್ಲಿ ಅನೇಕ ಕೆರೆಗಳು ದಾಖಲೆಯಲ್ಲಿ ಮಾತ್ರವೇ ಉಳಿದಿದೆ. ಅಂತಹ ಅನೇಕ ಕೆರೆಗಳನ್ನು ಗುರುತಿಸಿದ್ದು ಹಂತ ಹಂತವಾಗಿ ಕೆರೆಗಳನ್ನು ಅಭಿವೃದ್ಧಿಪಡಿಸಲಾಗುವುದು. ಕೆರೆಗಳ ಸಂರಕ್ಷಣೆಯಲ್ಲಿ ಸ್ಥಳೀಯರು ಕೂಡ ನಮ್ಮೊಂದಿಗೆ ಕೈ ಜೋಡಿಸಿ ಪ್ರಾಕೃತಿಕ ಸಂಪತ್ತನ್ನು ಮುಂದಿನ ಪೀಳಿಗೆಗೆ ಉಳಿಸಿಕೊಳ್ಳಲು ಸಹಕರಿಸಬೇಕು ಎಂದು ಹೇಳಿದ್ದಾರೆ. 

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರ್ ಮಾತನಾಡಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಕೆರೆ ಹಾಗೂ ಪಾರ್ಕ್ ಅಭಿವೃದ್ಧಿಗೆ ಪ್ರತ್ಯೇಕ ಯೋಜನೆ ರೂಪಿಸಲಾಗಿದೆ. ಶಾಸಕರ ಸಹಕಾರದೊಂದಿಗೆ ಈಗಾಗಲೇ ವಿವಿಧ ಕೆರೆಗಳ ಅಭಿವೃದ್ಧಿ ಪ್ರಗತಿ ಸಾಧಿಸುತ್ತಿದೆ. ನಗರದ ಪಾರ್ಕ್ ಗಳ ಅಭಿವೃದ್ಧಿ ಕಾಮಗಾರಿಗಳನ್ನು ಮುಂದಿನ ದಿನಗಳಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದರು‌. 

ಕಾರ್ಯಕ್ರಮದಲ್ಲಿ ಸ್ಥಳೀಯ ಕಾರ್ಪೋರೇಟರ್ ಪೂರ್ಣಿಮಾ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಡಾ. ಭಾಸ್ಕರ್, ಕರಣಿಕ ಶ್ರೀ ಮುಖ್ಯಪ್ರಾಣ ದೇವಸ್ಥಾನದ ಮುಖ್ಯ ಅರ್ಚಕರಾದ ಗುರುರಾಜ್ ಭಟ್ , ಪ್ರಮುಖರಾದ ಮುರಳೀಧರ ನಾಯಕ್, ರಮೇಶ್ ಹೆಗ್ಡೆ, ಪೂರ್ಣಿಮ ರಾವ್, ಚಂದ್ರಕಾಂತ್ ನಾಯಕ್, ವಿಕ್ರಂ ರಾವ್, ಗಣೇಶ್ ನಾಯಕ್,  ಕೇದರ್, ಗಿರೀಶ್ ಕುಮಾರ್, , ಸೌಮ್ಯ ರೈ, ಪಿ.ಸಿ ಗುರು, ಪ್ರಮೋದ್ ಆಚಾರ್ಯ, ಹರಿಪ್ರಸಾದ್, ಅಮರ್,  ವಸಂತ ಜೆ ಪೂಜಾರಿ, ಹಾಗೂ ಇನ್ನಿತರ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು