11:18 PM Monday26 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ಆಗ್ರಹ: ಜೂನ್ 27ರಂದು ಬ್ಯಾಂಕ್ ನೌಕರರ ಮುಷ್ಕರ

12/06/2022, 13:41

ಹೊಸದಿಲ್ಲಿ(reporterkarnataka.com)

ಸಾರ್ವಜನಿಕ ವಲಯದ ಬ್ಯಾಂಕ್‌ಗಳ ನೌಕರರು ಜೂನ್ 27 ರಂದು ಮುಷ್ಕರ ನಡೆಸುವುದಾಗಿ ಕರೆ ನೀಡಿದ್ದಾರೆ. ಪಿಂಚಣಿ ಸಮಸ್ಯೆ ಮತ್ತು ವಾರಕ್ಕೆ ಐದು ದಿನಗಳ ಕೆಲಸದ ಬೇಡಿಕೆಗೆ ಒತ್ತಾಯಿಸಿ ಮುಷ್ಕರ ನಡೆಯಲಿದೆ.

ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ, ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘ ಮತ್ತು ಬ್ಯಾಂಕ್ ಕಾರ್ಮಿಕರ ರಾಷ್ಟ್ರೀಯ ಸಂಘಟನೆ ಸೇರಿದಂತೆ ಒಂಬತ್ತು ಬ್ಯಾಂಕ್ ಒಕ್ಕೂಟಗಳ ಸಂಸ್ಥೆಯಾದ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ ಮುಷ್ಕರ ನಡೆಸುವುದಾಗಿ ಕರೆ ನೀಡಿದೆ. ಎಲ್ಲ ಪಿಂಚಣಿದಾರರಿಗೆ ಪಿಂಚಣಿ ನವೀಕರಣ ಮತ್ತು ಪರಿಷ್ಕರಣೆ, ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ತೆಗೆದುಹಾಕುವುದು ಮತ್ತು ಎಲ್ಲಾ ಬ್ಯಾಂಕ್ ಉದ್ಯೋಗಿಗಳಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವುದೇ ಈ ಮುಷ್ಕರದ ಬೇಡಿಕೆಗಳು ಎಂದು ಯುಎಫ್‌ಬಿಯು ಸಭೆಯ ನಂತರ ಎಐಬಿಇಎ ಪ್ರಧಾನ ಕಾರ್ಯದರ್ಶಿ ಸಿಎಚ್ ವೆಂಕಟಾಚಲಂ ತಿಳಿಸಿದ್ದಾರೆ. 

ಇನ್ನು ಬ್ಯಾಂಕು ನೌಕರರಿಗೆ ಎರಡನೇ ಹಾಗೂ ನಾಲ್ಕನೇ ಶನಿವಾರ ಈಗಾಗಲೇ ರಜೆಯಿದ್ದು, ಇನ್ನು ಉಳಿದ ಶನಿವಾರಗಳಂದು ಅರ್ಧದಿನವಷ್ಟೇ ಬ್ಯಾಂಕ್ ತೆರೆದಿರುತ್ತದೆ. ಈ ಎರಡು ಶನಿವಾರ ಕೂಡ ರಜೆ ನೀಡಬೇಕು ಎಂಬುದು ಬ್ಯಾಂಕ್ ನೌಕರರ ಬೇಡಿಕೆಯಾಗಿದೆ.

ಒಕ್ಕೂಟಗಳ ಬೇಡಿಕೆಗಳಿಗೆ ಸರ್ಕಾರ ಮತ್ತು ಬ್ಯಾಂಕ್‌ಗಳ ಆಡಳಿತ ಮಂಡಳಿ ಸಂವೇದನಾಶೀಲವಾಗಿದ್ದರೆ, ದೇಶಾದ್ಯಂತ ಸುಮಾರು 7 ಲಕ್ಷ ಕಾರ್ಮಿಕರು ಮುಷ್ಕರದಲ್ಲಿ ಭಾಗವಹಿಸಲಿದ್ದಾರೆ ಎಂದು ಎಐಬಿಒಸಿ ಪ್ರಧಾನ ಕಾರ್ಯದರ್ಶಿ ಸೌಮ್ಯಾ ದತ್ತಾ ತಿಳಿಸಿದ್ದಾರೆ .

ಒಂದು ವೇಳೆ ಬ್ಯಾಂಕ್ ನೌಕರರು ಜೂ.27ರಂದು ಮುಷ್ಕರ ನಡೆಸಿದರೆ ಸತತ 3 ದಿನಗಳ ಕಾಲ ಬ್ಯಾಂಕ್ ಮುಚ್ಚಿರಲಿದೆ. ಜೂ.25 ನಾಲ್ಕನೇ ಶನಿವಾರ ಹಾಗೂ ಜೂ.26 ಭಾನುವಾರವಾದ ಕಾರಣ ಬ್ಯಾಂಕುಗಳಿಗೆ ರಜೆಯಿರುತ್ತದೆ. ಇದರಿಂದ ಬ್ಯಾಂಕ್ ಗ್ರಾಹಕರಿಗೆ ತೊಂದರೆಯುಂಟಾಗುವ ಸಾಧ್ಯತೆಯಿದೆ.

ಇತ್ತೀಚಿನ ಸುದ್ದಿ

ಜಾಹೀರಾತು