3:11 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮೊದಲು ತೀರ್ಪು, ನಂತರ ವಿಚಾರಣೆ: ಇದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಟೈಲ್!

18/06/2021, 08:01

ಬೆಂಗಳೂರು(reporterkarnataka news): ರಾಜ್ಯ ಬಿಜೆಪಿಯ ಬಿಕ್ಕಟ್ಟು ಶಮನ ಮಾಡಲೆಂದು ಆಗಮಿಸಿದ ಪಕ್ಷದ ಉಸ್ತುವಾರಿ ಅರುಣ್ ಸಿಂಗ್ ಅವರು ಶಾಸಕರ ಅಭಿಪ್ರಾಯ ಕೇಳುವ ಮುನ್ನವೇ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ಉತ್ತಮ ಕೆಲಸ ಮಾಡುತ್ತಿದೆ ಎಂದು ಬೆಂಗಳೂರಿನ ಏರ್ ಫೋರ್ಟ್ ನಲ್ಲೇ ಹೇಳಿಕೆ ನೀಡಿದ್ದರು. ಶಾಸಕರ ಅಭಿಪ್ರಾಯ ಆಲಿಸುವ ಮುನ್ನವೇ ಸಿಂಗ್ ಅವರು ಸರ್ಟಿಫಿಕೇಟ್ ನೀಡಿಯಾಗಿದೆ. ಇದೊಂದು ವಿಚಾರಣೆ ನಡೆಸುವ ಮುನ್ನವೇ ತೀರ್ಪು ಕೊಟ್ಟಂತಾಗಿದೆ.

ಬಿಜೆಪಿಯಲ್ಲಿ ಹೊಗೆಯಾಡುತ್ತಿರುವ ಅಸಮಾಧಾನದ ಕುರಿತು ಅರಿತುಕೊಳ್ಳಲು ಬಂದ ಅರುಣ್ ಸಿಂಗ್ ಅವರು ಮೊದಲಿಗೆ ಭಿನ್ಬಮತೀಯ ಶಾಸಕರ ಅಭಿಪ್ರಾಯವನ್ನು ಕ್ರೋಢೀಕರಿಸಬೇಕಿತ್ತು. ನಂತರ ಎಲ್ಲ ಶಾಸಕರ ಅಭಿಪ್ರಾಯ ಸಂಗ್ರಹಿಸಬೇಕಿತ್ತು. ನಂತರ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಉಪಸ್ಥಿತಿಯಲ್ಲಿ ಪಕ್ಷದ ಶಾಸಕರುಗಳ ಹಾಗೂ ಪದಾಧಿಕಾರಿಗಳ ಸಭೆ ನಡೆಸಬೇಕಿತ್ತು. ಇದೆಲ್ಲ ಮುಗಿದ ಬಳಿಕ ಅವರು ತನ್ನ ಅಭಿಪ್ರಾಯ ಮಂಡಿಸಬೇಕಿತ್ತು. ಅದೆಲ್ಲ ಬಿಟ್ಟು ಅರುಣ್ ಸಿಂಗ್ ಅವರು ಬೆಂಗಳೂರಿಗೆ ಕಾಲಿಡುತ್ತಿದ್ದಂತೆ ‘ಯಡಿಯೂರಪ್ಪ ಸೇಫ್’ ಅಂತ ಘೋಷಿಸಿಯೇ ಬಿಟ್ಟರು. ಯಡಿಯೂರಪ್ಪ ಸರಕಾರ ಒಳ್ಳೆಯ ಕೆಲಸ ಮಾಡುತ್ತಿದೆ. ಕೊರೊನಾವನ್ನು ಚೆನ್ನಾಗಿ ನಿರ್ವಹಿಸುತ್ತಿದೆ ಎಂದು 

ಹೇಳುವುದಾದರೆ ಅವರು ರಾಜ್ಯಕ್ಕೆ ಬರುವ ಅವಶ್ಯಕತೆ ಏನಿತ್ತು?  ದಿಲ್ಲಿಯಲ್ಲೇ ಕುಳಿತು ಈ ಹೇಳಿಕೆಯನ್ನು ನೀಡಬಹುದಿತ್ತಲ್ಲ? ಅದಲ್ಲದೆ ಪ್ರಮುಖ ಭಿನ್ನಮತೀಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಭೇಟಿಗೆ ಸಮಯ ನೀಡಿದ್ದರೂ ಕೊನೆಯ ಕ್ಷಣದಲ್ಲಿ ಅದನ್ನು ರದ್ದುಪಡಿಸಿದ್ದಾರೆ. ಯತ್ನಾಳ್ ಹೇಳಿಗೆ ನಾವು ಹೆಚ್ಚಿನ ಮಹತ್ವ ನೀಡುವುದಿಲ್ಲ, ನೀವು ಕೂಡ ಬಿಡಬೇಡಿ ಎಂದು ಮಾಧ್ಯಮಗಳಿಗೆ ಸಲಹೆ ನೀಡಿದ್ದಾರೆ. ಒಂದು ರೀತಿಯಲ್ಲಿ ಅರುಣ್ ಸಿಂಗ್ ಅವರಿಗೆ ಕರ್ನಾಟಕಕ್ಕೆ ಬಂದ ಉದ್ದೇಶವಾದರೂ ಏನು ಎನ್ನುವುದು ಅವರಿಗೇ ಸ್ಪಷ್ಟವಾಗಿ ಇದ್ದ ಹಾಗೆ ಕಾಣಿಸುತ್ತಿಲ್ಲ ಎಂದು ರಾಜಕೀಯ ಪಂಡಿತರು ವಿಶ್ಲೇಷಿಸುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು