2:56 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಿತ್ತೋತ್ಸವ ಕಾರ್ಯಕ್ರಮ 

12/06/2022, 14:59

ಬಂಟ್ವಾಳ(reporterkarnataka.com): ಕರ್ನಾಟಕ ಅರಣ್ಯ ಇಲಾಖೆ ಹಾಗೂ ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕದ ಜಂಟೀ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಿತ್ತೋತ್ಸವ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ಗಿಡ ನೆಡುವ, ಗಿಡ ವಿತರಣೆ ಹಾಗೂ ಸ್ನೇಕ್ ಕಿರಣ್ ಅವರಿಂದ ಹಾವು ಮತ್ತು ನಾವು ಮಾಹಿತಿ ಕಾರ್ಯಕ್ರಮಗಳೂ  ನಡೆದವು. ಕಾಲೇಜು ಅಭಿವೃದ್ಧಿ ಸಮಿತಿ ಅದ್ಯಕ್ಷ ಪ್ರಸಾದ್ ಕುಮಾರ್ ರೈ  ಉದ್ಘಾಟಿಸಿ ಪರಿಸರ  ಸಂರಕ್ಷಣೆ ಮತ್ತು ಮಾನವ  ಅಸ್ತಿತ್ವದ ಮಹತ್ವ ವನ್ನು ವಿವರಿಸಿದರು. 


ತುಂಬೆ ವಿಭಾಗ ದ ಉಪ  ಅರಣ್ಯ ವಲಯಾಧಿಕಾರಿ ಯಶೋಧರ ಅವರು ಅರಣ್ಯ ಸಂರಕ್ಷಣೆಯ ಪ್ರಾಮುಖ್ಯತೆ ಬಗ್ಗೆ  ತಾಂತ್ರಿಕ ಮಾಹಿತಿ ನೀಡಿದರು. ಕಾಲೇಜಿನ  ಪ್ರಾಂಶುಪಾಲ ಡಾ. ಪ್ರಕಾಶ್ಚಂದ್ರ  ಗಿಡ ನೆಡುವುದರ ಮಹತ್ವ ಪ್ರಕೃತಿ  – ಪರಿಸರ ಸಮತೋಲನದ  ಪ್ರಾಮುಖ್ಯತೆಯನ್ನು  ತಿಳಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರೊ ಹೈದರಾಲಿ  ಸ್ವಾಗತಿಸಿದರು. ಡಾ. ಅಪರ್ಣ  ಆಳ್ವ ವಂದಿಸಿದರು. ಪ್ರೊ ಬಾಲ ಸುಬ್ರಮಣ್ಯ,ವಲಯ ಅರಣ್ಯ ಇಲಾಖೆಯ  ಜಿತೇಶ್, ರೇಖಾ ಹಾಗೂ ಭಾಸ್ಕರ್ ಕಾರ್ಯಕ್ರಮ ಆಯೋಜನೆಗೆ ಸಹಕರಿಸಿದರು. ಜ್ಞಾನೇಶ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು