12:36 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಿತ್ತೋತ್ಸವ ಕಾರ್ಯಕ್ರಮ 

12/06/2022, 14:59

ಬಂಟ್ವಾಳ(reporterkarnataka.com): ಕರ್ನಾಟಕ ಅರಣ್ಯ ಇಲಾಖೆ ಹಾಗೂ ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕದ ಜಂಟೀ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಿತ್ತೋತ್ಸವ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ಗಿಡ ನೆಡುವ, ಗಿಡ ವಿತರಣೆ ಹಾಗೂ ಸ್ನೇಕ್ ಕಿರಣ್ ಅವರಿಂದ ಹಾವು ಮತ್ತು ನಾವು ಮಾಹಿತಿ ಕಾರ್ಯಕ್ರಮಗಳೂ  ನಡೆದವು. ಕಾಲೇಜು ಅಭಿವೃದ್ಧಿ ಸಮಿತಿ ಅದ್ಯಕ್ಷ ಪ್ರಸಾದ್ ಕುಮಾರ್ ರೈ  ಉದ್ಘಾಟಿಸಿ ಪರಿಸರ  ಸಂರಕ್ಷಣೆ ಮತ್ತು ಮಾನವ  ಅಸ್ತಿತ್ವದ ಮಹತ್ವ ವನ್ನು ವಿವರಿಸಿದರು. 


ತುಂಬೆ ವಿಭಾಗ ದ ಉಪ  ಅರಣ್ಯ ವಲಯಾಧಿಕಾರಿ ಯಶೋಧರ ಅವರು ಅರಣ್ಯ ಸಂರಕ್ಷಣೆಯ ಪ್ರಾಮುಖ್ಯತೆ ಬಗ್ಗೆ  ತಾಂತ್ರಿಕ ಮಾಹಿತಿ ನೀಡಿದರು. ಕಾಲೇಜಿನ  ಪ್ರಾಂಶುಪಾಲ ಡಾ. ಪ್ರಕಾಶ್ಚಂದ್ರ  ಗಿಡ ನೆಡುವುದರ ಮಹತ್ವ ಪ್ರಕೃತಿ  – ಪರಿಸರ ಸಮತೋಲನದ  ಪ್ರಾಮುಖ್ಯತೆಯನ್ನು  ತಿಳಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರೊ ಹೈದರಾಲಿ  ಸ್ವಾಗತಿಸಿದರು. ಡಾ. ಅಪರ್ಣ  ಆಳ್ವ ವಂದಿಸಿದರು. ಪ್ರೊ ಬಾಲ ಸುಬ್ರಮಣ್ಯ,ವಲಯ ಅರಣ್ಯ ಇಲಾಖೆಯ  ಜಿತೇಶ್, ರೇಖಾ ಹಾಗೂ ಭಾಸ್ಕರ್ ಕಾರ್ಯಕ್ರಮ ಆಯೋಜನೆಗೆ ಸಹಕರಿಸಿದರು. ಜ್ಞಾನೇಶ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು