10:05 PM Tuesday8 - July 2025
ಬ್ರೇಕಿಂಗ್ ನ್ಯೂಸ್
ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ…

ಇತ್ತೀಚಿನ ಸುದ್ದಿ

ಕಬಿನಿ ಹಿನ್ನೀರು ಪ್ರದೇಶದಲ್ಲಿ ಪ್ರವಾಸಿಗರ ಆಕರ್ಷಿಸುತ್ತಿದ್ದ ಶಕ್ತಿಮಾನ್‌ ಆನೆ ಇನ್ನಿಲ್ಲ

12/06/2022, 20:14

ಮೈಸೂರು(reporterkarnataka.com): ಕಬಿನಿ ಹಿನ್ನೀರಿನ ಪ್ರದೇಶದಲ್ಲಿ ತನ್ನ ನೀಳ ದಂತದ ಮೂಲಕ ಕೋಟಿಗಟ್ಟಲೆ ವನ್ಯಜೀವಿ ಪ್ರಿಯರ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದ ಕಬಿನಿ ಭೋಗೇಶ್ವರ ಹಿರಿಯಾನೆ ಸಾವನ್ನಪ್ಪಿದೆ.

ಮೈಸೂರಿನ ಹೆಚ್.ಡಿ.ಕೋಟೆ ತಾಲೂಕಿನ ಕಬಿನಿ ಹಿನ್ನೀರಿನ ಪ್ರದೇಶದಲ್ಲಿ ಎಲ್ಲರ ಆಕರ್ಷಣೆಯಾಗಿತ್ತು. ಉದ್ದ ದಂತಗಳಿಂದಲೇ ಫೇಮಸ್‌ ಆಗಿದ್ದ ಭೋಗೇಶ್ವರ ನಾಗರಹೊಳೆ, ಬಂಡೀಪುರ ವ್ಯಾಪ್ತಿಯಲ್ಲಿ ಹೆಚ್ಚಾಗು ಕಾಣಸಿಗುತ್ತಿತ್ತು. ಸಫಾರಿಯಲ್ಲಿ ಆಗಾಗ ಪ್ರವಾಸಿಗರಿಗೆ ಕಣ್ಣಿಗೆ ಬೀಳುತ್ತಿತ್ತು. ಸಫಾರಿಗೆ ಹೋಗುವವರ ಹೆಚ್ಚಿನ ನಿರೀಕ್ಷೆ ಇದರ ಮೇಲೆಯ ಇರುತ್ತಿತ್ತು.

ಈ ಆನೆ ಬಂಡೀಪುರ ವ್ಯಾಪ್ತಿಯ ಗುಂಡ್ರೆ ವಲಯದ ಅರಣ್ಯದಲ್ಲಿ ಶನಿವಾರ ಮೃತಪಟ್ಟಿದ್ದು, ವಯೋಸಹಜವಾಗಿ ಆನೆ ಸಾವನ್ನಪ್ಪಿದೆ ಎಂದು ಅರಣ್ಯಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. 

ಈ ಆನೆಗೆ 50ರಿಂದ 60 ವರ್ಷ ವಯಸ್ಸಾಗಿರಬಹುದು ಎನ್ನಲಾಗಿದೆ.

ಕಬಿನಿ ಹಿನ್ನೀರಿನಲ್ಲಿ ಇದೇ ವಯಸ್ಸಿನ ಮೂರ್ನಾಲ್ಕು ಆನೆಗಳಿದ್ದು ಅವುಗಳಲ್ಲಿ ಭೋಗೇಶ್ವರ ಆನೆಗೆ ಹೆಚ್ಚಿನ ಪ್ರಾಶಸ್ತ್ಯ. ಅಲ್ಲಿನವರು ಕಾಡಿನಲ್ಲಿ ಪೂಜೆ ಮಾಡುವ ಭೋಗೇಶ್ವರ ಹೆಸರನ್ನೇ ಈ ಗಂಡಾನೆಗೆ ನಾಮಕರಣ ಮಾಡಿದ್ದರು. ವನ್ಯಜೀವಿ ಪ್ರಿಯರು ಮಾತ್ರ ಇದನ್ನು ಮಿಸ್ಟರ್‌ ಕಬಿನಿ ಎಂದು ಕರೆಯುತ್ತಿದ್ದರು. ಸುಮಾರು 7/8 ಅಡಿ ಉದ್ದವಿರುವ ತನ್ನ ನೀಳ ದಂತಗಳು ನೆಲಕ್ಕೆ ತಾಕುತ್ತಿದ್ದವು. ಒಂದರ ಮೇಲೊಂದು ಕೊಂಬು ಬೆಳೆದಿದೆ. ತನ್ನ ರಾಜ ಗಾಂಭೀರ್ಯದೆ ನಡಿಗೆಯಿಂದ ಎಲ್ಲರ ಗಮನ ಸೆಳೆದಿದ್ದ ಭೋಗೇಶ್ವರನ ಸಾವು ವನ್ಯಪ್ರಿಯರಿಗೆ ಆಘಾತವಾಗಿದೆ.

ಕಳೆದ ಒಂದು ವಾರದ ಹಿಂದೆ ಮತ್ತೊಂದು ಆನೆ ಜೊತೆ ಜಗಳಕ್ಕಿಳಿದಿತ್ತು ಆಗಲಿಂದಲೂ ಆನೆ ಆರೋಗ್ಯದಲ್ಲಿ ಸ್ವಲ್ಪ ಆರೋಗ್ಯದಲ್ಲಿ ಏರು-ಪೇರು ಉಂಟಾಗಿದೆ. ಆದರೆ ಆನೆ ದೇಹದಲ್ಲಿ ಯಾವುದೇ ಗಾಯಗಳೂ ಕಂಡು ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆನೆ ದಂತಗಳನ್ನು ಹೆಚ್ಚಿನ ಪರೀಕ್ಷೆಗಾಗಿ ಮೈಸೂರು ಡಿಪೋಗೆ ಕಳುಹಿಸಲಾಗಿದೆ.

ಇನ್ನೂ ಆನೆಯ ಕಳೇಬರವನ್ನು ಸಂಸ್ಕಾರ ಮಾಡದೆ ಕಾಡು ಪ್ರಾಣಿಗಳಿಗೆ ಆಹಾರವಾಗಿ ಅಲ್ಲಿಯೇ ಬಿಡಲಾಗಿದೆ. ಹಲವಾರು ವನ್ಯಜೀವಿ ಸಾಕ್ಷ್ಯಚಿತ್ರಗಳು ಹಾಗೂ ಸಿನಿಮಾಗಳಲ್ಲೂ ಭೋಗೇಶ್ವರ ಕಾಣಿಸಿಕೊಂಡಿತ್ತು. ಜಗತ್ಪ್ರಸಿದ್ಧ, ಜಗದ ಎಲ್ಲಾ ಚಾನಲ್‌ಗಳಲ್ಲಿ ಕಾಣಿಸಿಕೊಂಡ ಹೆಗ್ಗಳಿಕೆ ಭೋಗೇಶ್ವರ ಪಾತ್ರವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು