2:57 AM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಸಿಬಿಐ ಕಾರ್ಯಾಚರಣೆ: ರೈಲ್ವೆ ಸಿಬ್ಬಂದಿಗೆ ನಕಲಿ ವೈದ್ಯಕೀಯ ಪ್ರಮಾಣಪತ್ರ ನೀಡುತ್ತಿದ್ದ 3 ಆರೋಪಿಗಳ ಬಂಧನ

12/06/2022, 21:01

ಮಂಗಳೂರು(reporterkarnataka.com):  ರೈಲ್ವೆಯಲ್ಲಿ ನೌಕರರ ಆರೋಗ್ಯ ಕ್ಷಮತೆಯ ಬಗ್ಗೆ ನಕಲಿ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುತ್ತಿದ್ದ ಓರ್ವ ಆರೋಪಿಯನ್ನು
ಮಂಗಳೂರಿನಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ಬೆಂಗಳೂರಿನಿಂದ ಆಗಮಿಸಿದ ಸಿಬಿಐ ತಂಡ ಈ ಕಾರ್ಯಾಚರಣೆ ನಡೆಸಿದೆ. ಮಂಗಳೂರು ನಗರದ ಇಬ್ರಾಹೀಂ ಎಂಬಾತ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.

ಈತನನ್ನು ಬಂಧಿಸಿರುವ ಬಗ್ಗೆ ಸಿಬಿಐ ಅಧಿಕಾರಿಗಳು ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ರೈಲ್ವೆ ಇಲಾಖೆಯಲ್ಲಿ ವರ್ಷಂಪ್ರತಿ ನೌಕರರು ದೈಹಿಕ ಕ್ಷಮತೆಯ ಬಗ್ಗೆ ರೈಲ್ವೆ ಇಲಾಖೆಯ ಆರೋಗ್ಯ ಇಲಾಖೆಯಿಂದ ಫಿಟ್ ನೆಸ್ ಸರ್ಟಿಫಿಕೇಟ್ ಅನ್ನು ನೀಡಬೇಕು. ಈ ಹಿನ್ನೆಲೆಯಲ್ಲಿ ರೈಲ್ವೆ ನೌಕರರು ಮಂಗಳೂರಿನ ರೈಲ್ವೆ ನಿಲ್ದಾಣದ ಬಳಿಯಿ

ರೈಲ್ವೆ ಇಲಾಖೆಯ ಆರೋಗ್ಯ ಇಲಾಖೆಯಲ್ಲಿ ತಪಾಸಣೆ ನಡೆಸಿ ಸರ್ಟಿಫಿಕೇಟ್ ಪಡೆಯಬೇಕು. ಆದರೆ ಇಬ್ರಾಹೀಂ ಎಂಬಾತನು ನಕಲಿ ವೈದ್ಯಕೀಯ ಪ್ರಮಾಣ ಪತ್ರ ನೀಡುತ್ತಿರುವ ಬಗ್ಗೆ ಮಾಹಿತಿಯಿರುವ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಬಂಧಿತ ಆರೋಪಿ ಇಬ್ರಾಹಿಂ ಸಾವಿರಕ್ಕೂ ಅಧಿಕ ನಕಲಿ ವೈದ್ಯಕೀಯ ಪ್ರಮಾಣ ಪತ್ರ ನೀಡಿರುವುದು ಅಧಿಕಾರಿಗಳಿಗೆ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು