2:19 AM Monday26 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಸಿಬಿಐ ಕಾರ್ಯಾಚರಣೆ: ರೈಲ್ವೆ ಸಿಬ್ಬಂದಿಗೆ ನಕಲಿ ವೈದ್ಯಕೀಯ ಪ್ರಮಾಣಪತ್ರ ನೀಡುತ್ತಿದ್ದ 3 ಆರೋಪಿಗಳ ಬಂಧನ

12/06/2022, 21:01

ಮಂಗಳೂರು(reporterkarnataka.com):  ರೈಲ್ವೆಯಲ್ಲಿ ನೌಕರರ ಆರೋಗ್ಯ ಕ್ಷಮತೆಯ ಬಗ್ಗೆ ನಕಲಿ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುತ್ತಿದ್ದ ಓರ್ವ ಆರೋಪಿಯನ್ನು
ಮಂಗಳೂರಿನಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ಬೆಂಗಳೂರಿನಿಂದ ಆಗಮಿಸಿದ ಸಿಬಿಐ ತಂಡ ಈ ಕಾರ್ಯಾಚರಣೆ ನಡೆಸಿದೆ. ಮಂಗಳೂರು ನಗರದ ಇಬ್ರಾಹೀಂ ಎಂಬಾತ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.

ಈತನನ್ನು ಬಂಧಿಸಿರುವ ಬಗ್ಗೆ ಸಿಬಿಐ ಅಧಿಕಾರಿಗಳು ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ರೈಲ್ವೆ ಇಲಾಖೆಯಲ್ಲಿ ವರ್ಷಂಪ್ರತಿ ನೌಕರರು ದೈಹಿಕ ಕ್ಷಮತೆಯ ಬಗ್ಗೆ ರೈಲ್ವೆ ಇಲಾಖೆಯ ಆರೋಗ್ಯ ಇಲಾಖೆಯಿಂದ ಫಿಟ್ ನೆಸ್ ಸರ್ಟಿಫಿಕೇಟ್ ಅನ್ನು ನೀಡಬೇಕು. ಈ ಹಿನ್ನೆಲೆಯಲ್ಲಿ ರೈಲ್ವೆ ನೌಕರರು ಮಂಗಳೂರಿನ ರೈಲ್ವೆ ನಿಲ್ದಾಣದ ಬಳಿಯಿ

ರೈಲ್ವೆ ಇಲಾಖೆಯ ಆರೋಗ್ಯ ಇಲಾಖೆಯಲ್ಲಿ ತಪಾಸಣೆ ನಡೆಸಿ ಸರ್ಟಿಫಿಕೇಟ್ ಪಡೆಯಬೇಕು. ಆದರೆ ಇಬ್ರಾಹೀಂ ಎಂಬಾತನು ನಕಲಿ ವೈದ್ಯಕೀಯ ಪ್ರಮಾಣ ಪತ್ರ ನೀಡುತ್ತಿರುವ ಬಗ್ಗೆ ಮಾಹಿತಿಯಿರುವ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಬಂಧಿತ ಆರೋಪಿ ಇಬ್ರಾಹಿಂ ಸಾವಿರಕ್ಕೂ ಅಧಿಕ ನಕಲಿ ವೈದ್ಯಕೀಯ ಪ್ರಮಾಣ ಪತ್ರ ನೀಡಿರುವುದು ಅಧಿಕಾರಿಗಳಿಗೆ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು