2:02 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಸಿಬಿಐ ಕಾರ್ಯಾಚರಣೆ: ರೈಲ್ವೆ ಸಿಬ್ಬಂದಿಗೆ ನಕಲಿ ವೈದ್ಯಕೀಯ ಪ್ರಮಾಣಪತ್ರ ನೀಡುತ್ತಿದ್ದ 3 ಆರೋಪಿಗಳ ಬಂಧನ

12/06/2022, 21:01

ಮಂಗಳೂರು(reporterkarnataka.com):  ರೈಲ್ವೆಯಲ್ಲಿ ನೌಕರರ ಆರೋಗ್ಯ ಕ್ಷಮತೆಯ ಬಗ್ಗೆ ನಕಲಿ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುತ್ತಿದ್ದ ಓರ್ವ ಆರೋಪಿಯನ್ನು
ಮಂಗಳೂರಿನಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ಬೆಂಗಳೂರಿನಿಂದ ಆಗಮಿಸಿದ ಸಿಬಿಐ ತಂಡ ಈ ಕಾರ್ಯಾಚರಣೆ ನಡೆಸಿದೆ. ಮಂಗಳೂರು ನಗರದ ಇಬ್ರಾಹೀಂ ಎಂಬಾತ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.

ಈತನನ್ನು ಬಂಧಿಸಿರುವ ಬಗ್ಗೆ ಸಿಬಿಐ ಅಧಿಕಾರಿಗಳು ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ರೈಲ್ವೆ ಇಲಾಖೆಯಲ್ಲಿ ವರ್ಷಂಪ್ರತಿ ನೌಕರರು ದೈಹಿಕ ಕ್ಷಮತೆಯ ಬಗ್ಗೆ ರೈಲ್ವೆ ಇಲಾಖೆಯ ಆರೋಗ್ಯ ಇಲಾಖೆಯಿಂದ ಫಿಟ್ ನೆಸ್ ಸರ್ಟಿಫಿಕೇಟ್ ಅನ್ನು ನೀಡಬೇಕು. ಈ ಹಿನ್ನೆಲೆಯಲ್ಲಿ ರೈಲ್ವೆ ನೌಕರರು ಮಂಗಳೂರಿನ ರೈಲ್ವೆ ನಿಲ್ದಾಣದ ಬಳಿಯಿ

ರೈಲ್ವೆ ಇಲಾಖೆಯ ಆರೋಗ್ಯ ಇಲಾಖೆಯಲ್ಲಿ ತಪಾಸಣೆ ನಡೆಸಿ ಸರ್ಟಿಫಿಕೇಟ್ ಪಡೆಯಬೇಕು. ಆದರೆ ಇಬ್ರಾಹೀಂ ಎಂಬಾತನು ನಕಲಿ ವೈದ್ಯಕೀಯ ಪ್ರಮಾಣ ಪತ್ರ ನೀಡುತ್ತಿರುವ ಬಗ್ಗೆ ಮಾಹಿತಿಯಿರುವ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಬಂಧಿತ ಆರೋಪಿ ಇಬ್ರಾಹಿಂ ಸಾವಿರಕ್ಕೂ ಅಧಿಕ ನಕಲಿ ವೈದ್ಯಕೀಯ ಪ್ರಮಾಣ ಪತ್ರ ನೀಡಿರುವುದು ಅಧಿಕಾರಿಗಳಿಗೆ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು