11:18 AM Thursday11 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ರಾಜ್ಯದಲ್ಲಿ 37,48,700 ವಸತಿ ರಹಿತರು: ವಿಧಾನ ಪರಿಷತ್ ನಲ್ಲಿ ಸಚಿವ ಜಮೀರ್ ಖಾನ್ ಬೆಂಗಳೂರು ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಧರ್ಮ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ ಉದ್ಘಾಟನೆ ಬೆಂಗಳೂರು ನಗರದಲ್ಲಿ ಕ್ವಾಂಟಮ್ ಮೆಟೀರಿಯಲ್ಸ್ ನೆಟ್‌ವರ್ಕ್ (Q-MINt) ಸ್ಥಾಪಿಸಲು ಪ್ರಧಾನಿಗೆ ಸಿಎಂ ಪತ್ರ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳ ಸಮರ್ಪಕ ಜಾರಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೆಎಸ್ಸಾರ್ಟಿಸಿ ಬಸ್ ಪಲ್ಟಿ; ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ; ಕಂಡಕ್ಟರ್… ಸುವರ್ಣಸೌಧ ಮುತ್ತಿಗೆ ಹಾಕಲು ಯತ್ನ; ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಪ್ರತಿಭಟನಾಕಾರರು ಪೊಲೀಸ್… ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ನೂತನ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ಆಯ್ಕೆ ಸಿಎ ಸೈಟ್ ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ: ವಿಧಾನ…

ಇತ್ತೀಚಿನ ಸುದ್ದಿ

ಪೂಜಾರಳ್ಳಿ: “ಕೆರೆ ಉಳಿಸಿ-ರೈತರ ಹೊಲಗಳಿಗೆ ನೀರುಣುಸಿ” ಹೋರಾಟ, ಎಐಕೆಎಸ್ ನಿಂದ  ಡಿಸಿಗೆ ಒತ್ತಾಯ

12/06/2022, 23:00

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ತಾಲೂಕು ಪೂಜಾರಹಳ್ಳಿ ಕೆರೆಯಲ್ಲಿ, ” ಕೆರೆ ಉಳಿಸಿ ರೈತರ ಭೂಮಿಗಳಿಗೆ ನೀರುಣಿಸಿ” ಎಂಬ ಘೋಷಣೆಯೊಂದಿಗೆ ಅಖಿಲ ಭಾರತ ಕಿಸಾನ್ ಸಭಾ(AIKS) ಕೂಡ್ಲಿಗಿ ತಾಲೂಕು ಸಮಿತಿ, ಹಾಗೂ ಕನ್ನ ಬೋರಯ್ಯನ ಹಟ್ಟಿ  ಪೂಜಾರಹಳ್ಳಿ ತಾಂಡಾದ ಸಾವಿರಾರು ಜನಗಳ ನೇತೃತ್ವದಲ್ಲಿ ಹೋರಾಟದ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ನೀಡುವ ಮೂಲಕ ಕೆರೆಯ ಉಳಿಸುವ ಹೋರಾಟ ಮಾಡಲಾಯಿತು.

ವಿಜಯನಗರ ಜಿಲ್ಲಾಧಿಕಾರಿ ಗೆ ಮನವಿ ಸಲ್ಲಿಸಲಾಯಿತು. ಇದರ ಫಲವಾಗಿ ಕೆರೆ ಸರ್ವೆ ಇಲಾಖೆಯ ಅಧಿಕಾರಿಗಳು ಸರ್ವೆ ಮಾಡಿದರು.

ಕೆರೆಯ ಗಡಿ ಗುರುತಿಸಿ ಹದ್ದು ಬಸ್ತ್ ಮಾಡಲಾಗಿತ್ತು. ಜಿಲ್ಲಾಧಿಕಾರಿ ಸೂಚನೆಯಂತೆ ಜೂನ್10ರಂದು ಪೂಜಾರಳ್ಳಿ  ಕೆರೆಗೆ ಕಂದಾಯ ಇಲಾಖೆ ಹಾಗೂ ಸರ್ವೆ ಇಲಾಖೆ ಸೇರಿದಂತೆ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಕೆರೆಗೆ ಭೇಟಿ ನೀಡಿದರು. ಜಿಲ್ಲಾ ಅಪರ ಜಿಲ್ಲಾಧಿಕಾರಿ ಮಹೇಶಬಾಬು,ಜಿಲ್ಲಾ ಸರ್ವೆ ಇಲಾಖಾಧಿಕಾರಿ ಕುಸುಮಾ ಲತಾ, ತಹಶಿಲ್ದಾರರಾದ ಟಿ.ಜಗದೀಶ, ಕೂಡ್ಲಿಗಿ ತಾಲೂಕು ಸರ್ವೆ ಅಧಿಕಾರಿ ಕರಿಯಣ್ಣ ಹಾಗೂ ಸಿಬ್ಬಂದಿ, ಉಪ ತಹಶಿಲ್ದಾರರು ಹಾಗೂ ಕಂದಾಯ ಇಲಾಖಾ ಸಿಬ್ಬಂದಿ, ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿ, ಗ್ರ‍ಾಮ ಪಂಚಾತಿತಿ ಅಧ್ಯಕ್ಷೆ ಶಿಲ್ಪ ಬಸಪ್ಪ,ಸದಸ್ಯರಾದ ನಾಗೇಶ ಸೆರಿದಂತೆ ಬಹುತೇಕ ಗ್ರಾಪಂ ಸದಸ್ಯರು. ಅಖಿಲ ಭಾರತ ಕಿಸಾನ್ ಸಭಾ ರಾಜ್ಯ ಉಪಾಧ್ಯಕ್ಷ ಹೆಚ್.ವೀರಣ್ಣ ಅವರು ಮಾತನಾಡಿ, ಇದು ಅಖಿಲ ಭಾರತ ಕಿಸಾನ್ ಸಭಾ ದ ಹೋರಾಟಕ್ಕೆ ಸಿಕ್ಕ ಜಯವಾಗಿದೆ. ಗೆಲುವಿನ ಪ್ರಥಮ ಹೆಜ್ಜೆಯಾಗಿದೆ ಅಂತಿಮವರೆಗೂ ಹೋರಾಟ ನಿಲ್ಲದು,ಸುಮಾರು 50ಎಕರೆ ಗೂ ಹೆಚ್ಚು ಕೆರೆಯ ಭೂಮಿ ಒತ್ತುವರಿಯಾಗಿರುವುದು ಸಾಬೀತಾಗಿದೆ. ಮನೆಗಳನ್ನು ನಿರ್ಮಿಸಲಾಗಿದೆ ಹಾಗೂ ಕೆಲವರು ಬಿತ್ತನೆ ಮಾಡಿಕೊಂಡಿದ್ದಾರೆ. ಅಕ್ರಮ ವಾಗಿ ಒತ್ತುವರಿ ಮಾಡಿಕೊಂಡಿರುವುದನ್ನು, ಶೀಘ್ರವೇ ತೆರವುಗೊಳೊಸಬೇಕಿದೆ. ಇಲ್ಲವಾದಲ್ಲಿ ಹೋರಾಟ ನಿರಂತರ ನಡೆಯಲಿದೆ. ಸಂಬಂಧಿಸಿದಂತೆ ಸ್ಥಳೀಯ ಆಡಳಿತ, ಕಂದಾಯ ಇಲಾಖೆ ಹಾಗೂ ಕೆಲ ಇಲಾಖೆಗಳ ನಿರ್ಲಕ್ಷ್ಯದ ವಿರುದ್ಧ ಕಾನೂನು ಹೋರಾಟ ಅನಿವಾರ್ಯವಾಗಲಿದೆ  ಎಂದು ಅವರು ಎಚ್ಚರಿಸಿದ್ದಾರೆ. 


ಕಾರ್ಮಿಕ ಮುಖಂಡರಾದ ದಾಸಣ್ಣ ಮಹೇಶ್,ಗೆದ್ದಯ್ಯ,ಸಿದ್ದಲಿಂಗಸ್ವಾಮಿ, ಜಿ.ಎಚ್.ಅಂಜನಿ, ಅಜ್ಜನ ಬೋರಣ್ಣ,ಕೋಟಗಿ ತಿಪ್ಪೇಸ್ವಾಮಿ, ಓಬಣ್ಣ,ಬೋರಯ್ಯ, ನಾಗರಾಜಪ್ಪ, ಎನ್.ಪಿ.ವೆಂಕಟೇಶ್ ಸೇರಿದಂತೆ ಪೂಜಾರಿಹಳ್ಳಿ ಅಖಿಲ ಭಾರತ ಕಿಸಾನ್ ಸಭಾದ ಕಾರ್ತಕರ್ತರು, ಗ್ರಾಮಸ್ಥರು ಹಾಗೂ ಕಾರ್ಮಿಕರು ಇದರು.

ಇತ್ತೀಚಿನ ಸುದ್ದಿ

ಜಾಹೀರಾತು