5:32 AM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ತಲಪಾಡಿ ಶಾರದಾ ವಿದ್ಯಾನಿಕೇತನದ ವಿದ್ಯಾರ್ಥಿ ಆತ್ಮಹತ್ಯೆ: ಕ್ರಮ ಕೈಗೊಳ್ಳಲು ಎನ್ ಎಸ್ ಯುಐ ಆಗ್ರಹ

12/06/2022, 23:08

ಮಂಗಳೂರು(reporterkarnataka.com): ತನ್ನ ತಾಯಿಯ ಜನ್ಮದಿನದಂದು ಶುಭ ಹಾರೈಸಲು ವಾರ್ಡನ್ ಮೊಬೈಲ್ ಫೋನ್ ನೀಡಲಿಲ್ಲ ಎಂದು ಆರೋಪಿಸಿ ತಲಪಾಡಿಯ ಶಾರದಾ ವಿದ್ಯಾನಿಕೇತನಾ ಖಾಸಗಿ ವಿದ್ಯಾಸಂಸ್ಥೆಯ 9ನೇ ತರಗತಿಯ ವಿದ್ಯಾರ್ಥಿ  ಬೆಂಗಳೂರು ಮೂಲದ ಪೂರ್ವಜ್ (14) ಎಂಬ ಬಾಲಕನೊಬ್ಬ ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ವಿದ್ಯಾ ಸಂಸ್ಥೆಯ ಬೇಜವಾಬ್ದಾರಿತನಕ್ಕೆ ಎನ್ ಎಸ್ ಯುಐ ದ.ಕ. ಜಿಲ್ಲಾ ಸಮಿತಿ ಖಂಡಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದೇ ಪದೇ ಖಾಸಗಿ ಶಿಕ್ಷಣ ಸಂಸ್ಥೆಗಳ ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದೆ, ಈ ಬಗ್ಗೆ ಜಿಲ್ಲಾಡಳಿತ ಹಾಗೂ ಸರ್ಕಾರದ ಯಾವುದೇ ರೀತಿಯ ಸೂಕ್ತ ಕ್ರಮಗೊಳ್ಳದಿರುವುದು ಖಂಡನೀಯ ಎಂದು ಎನ್ ಎಸ್ ಯುಐ ಹೇಳಿದೆ.

ಹಾಸ್ಟೆಲ್ ನಲ್ಲಿ ನಿಯಮಾವಳಿ ಪ್ರಕಾರ ವಾರ್ಡನ್ ಮೊಬೈಲ್ ನೀಡಿಲ್ಲ ಎನ್ನಲಾಗಿದೆ. ಇದರಿಂದ ಮನನೊಂದ ಬಾಲಕ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡಿದ್ದಾನೆ.

ತುರ್ತು ಅವಶ್ಯಕತೆಯಿರುವ ಸಂದರ್ಭದಲ್ಲಿ ವಾರ್ಡನ್ ವಿದ್ಯಾರ್ಥಿಗೆ ಪೋಷಕರೊಂದಿಗೆ ಮಾತನಾಡಲು ಅವಕಾಶ ಮಾಡಿಕೊಡಬೇಕಿತ್ತು, ಇದರಿಂದ ಅಪ್ರಾಪ್ತ ವಯಸ್ಸಿನ ಬಾಲಕ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಇದಕ್ಕೆ ವಿದ್ಯಾಸಂಸ್ಥೆಯೇ ನೇರ ಹೊಣೆಯಾಗಿದ್ದು, ಆದ್ದರಿಂದ ಜಿಲ್ಲಾಡಳಿತ ಹಾಗೂ ಸರ್ಕಾರವು ಖಾಸಗಿ ವಿದ್ಯಾಸಂಸ್ಥೆಗಳ ಕಟ್ಟುನಿಟ್ಟಾದ ನಿಯಮಗಳಿಗೆ ಬ್ರೇಕ್ ಹಾಕಬೇಕಾಗಿದೆ.

ಎನ್ ಎಸ್ ಯುಐ ಅಧ್ಯಕ್ಷ

ವಿದ್ಯಾರ್ಥಿಯ ಆತ್ಮಹತ್ಯೆಗೆ ಕಾರಣರಾದವ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎನ್ ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಅಧ್ಯಕ್ಷ ಸವಾದ್ ಸುಳ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು