11:28 AM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಮಂಗಳೂರು ರಥಬೀದಿಯ ವೆಂಕಟರಮಣ ದೇವಳದಲ್ಲಿ ಸಾಮೂಹಿಕ ಬ್ರಹ್ಮೋಪದೇಶ  

13/06/2022, 19:02

ಚಿತ್ರ: ಮಂಜು ನೀರೇಶ್ವಾಲ್ಯ                              ಮಂಗಳೂರು(reporterkarnataka.com) : ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಪ್ರತಿಷ್ಠಾ ದಶಮಾನೋತ್ಸವ ಪ್ರಯುಕ್ತ ಶ್ರೀ ದೇವಳದಲ್ಲಿ ಸಮಾಜದ 18 ವಟುಗಳಿಗೆ ಸಾಮೂಹಿಕ ಬ್ರಹ್ಮೋಪದೇಶ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ನೆರವೇರಿತು.

ಭಾನುವಾರ ದೇವತಾ ಪೂಜನೆ , ಉದ್ದಿನ ಮುಹೂರ್ಥ ಕಾರ್ಯಕ್ರಮಗಳು ಜರಗಿದವು . ಸೋಮವಾರ ಕೋಟೇಶ್ವರ ಮೊಕ್ಕಾಂ ನಿಂದ ಶ್ರೀಗಳವರು ಆಗಮಿಸಿ ಶ್ರೀ ದೇವರ ದರ್ಶನ ಬಳಿಕ ಶ್ರೀ ದೇವರ ಸನ್ನಿಧಿಯಲ್ಲಿ ವಟುಗಳು ಶ್ರೀಗಳವರ ಅಮೃತ ಹಸ್ತಗಳಿಂದ  ಯಜ್ನೋಪವಿತ ಧಾರಣೆ

ಬಳಿಕ ರಾಜಾಂಗಣದಲ್ಲಿ  ವಟುಗಳಿಗೆ ಶ್ರೀಗಳವರು ಭಿಕ್ಷೆ ಹಾಗೂ ತಪ್ತ ಮುದ್ರಾಧಾರಣೆ ನೀಡಿದರು . ಬಳಿಕ ಆಶೀರ್ವಚನ ನಡೆಯಿತು. ಈ ಸಂದರ್ಭದಲ್ಲಿ ದೇವಳದ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಸಾಹುಕಾರ್ ಕಿರಣ್ ಪೈ , ಸತೀಶ್ ಪ್ರಭು , ಗಣೇಶ್ ಕಾಮತ್ , ಎಂ . ಜಗನ್ನಾಥ್ ಕಾಮತ್ , ಚಾತುರ್ಮಾಸ ಸಮಿತಿಯ ಚೇರ್ಮನ್ ಮುಂಡ್ಕುರ್ ರಾಮದಾಸ್ ಕಾಮತ್ , ಅಧ್ಯಕ್ಷ ಎಂ . ಪದ್ಮನಾಭ ಪೈ , ತಂತ್ರಿ ಗಳಾದ ಪಂಡಿತ್ ನರಸಿಂಹ ಆಚಾರ್ಯ ಹಾಗೂ ಚಾತುರ್ಮಾಸ ಸಮಿತಿಯ ಪದಾಧಿಕಾರಿಗಳು ಮತ್ತು ನೂರಾರು ಸಮಾಜ ಬಾಂಧವರು ಉಪಸ್ಥಿತರಿದ್ದರು.  

ಇತ್ತೀಚಿನ ಸುದ್ದಿ

ಜಾಹೀರಾತು