4:18 PM Saturday20 - December 2025
ಬ್ರೇಕಿಂಗ್ ನ್ಯೂಸ್
ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಹಗರಣಗಳ ಸರದಾರ; ಮೇವು ತಿಂದೋರು ಜೈಲಿನಲ್ಲಿದ್ದಾರೆ, ಈಗ ಪೇಪರ್ ತಿಂದೋರು ಕೂಡ ಜೈಲಿಗೆ ಹೋಗುತ್ತಾರೆ: ಸಿ.ಟಿ.ರವಿ

13/06/2022, 20:00

ಬೆಂಗಳೂರು(reporterkarnataka.com): ಹಗರಣಗಳ ಸರದಾರ ಕಾಂಗ್ರೆಸ್ ಪಕ್ಷ. ಕಾಲಿನಿಂದ ತಲೆಯವರೆಗೂ ಹಗರಣ ಹೊದ್ದುಕೊಂಡಿರುವುದು ಕಾಂಗ್ರೆಸ್. ಮೇವು ತಿಂದವರು ಜೈಲಿನಲ್ಲಿದ್ದಾರೆ. ಈಗ ಪೇಪರ್ ತಿಂದವರು ಜೈಲಿಗೆ ಹೋಗುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯರ್ಶಿ ಸಿ.ಟಿ.ರವಿ ಭವಿಷ್ಯ ವ್ಯಂಗ್ಯವಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ನವರು ಸಂವಿಧಾನಕ್ಕಿಂತ ಮೇಲ್ಪಟ್ಟವರಾ? ಕಾಂಗ್ರೆಸ್​ನವರಿಗೆ ಭಯ ಯಾಕೆ? ಎಂದು ಪ್ರಶ್ನಿಸಿದರು.

ಇಂಡಿಯನ್ ಆಯಿಲ್ ಸ್ಕ್ಯಾಮ್, 2ಜಿ ಸ್ಪೆಕ್ಟ್ರಂ, ಆಗಸ್ಟಾ ವೆಸ್ಟ್​ಲ್ಯಾಂಡ್, ಕೆಜಿ ಬೇಸಿನ್ ಹಗರಣವನ್ನು ಕಾಂಗ್ರೆಸ್​ ​ಮಾಡಿದೆ. ಇದೀಗ ಭ್ರಷ್ಟಾಚಾರ ನಡೆಸಿದವರಿಗೆ ಭ್ರಷ್ಟಾಚಾರಿಗಳೇ ಬೆಂಬಲ ಕೊಡುತ್ತಿದ್ದಾರೆ. ಹಾಗಲಕಾಯಿಗೆ ಬೇವಿನ ಕಾಯಿ ಸಾಕ್ಷಿ ಎಂಬಂತೆ ಕಾಂಗ್ರೆಸ್​ನವರು ಬೀದಿಗಿಳಿದಿದ್ದಾರೆ. ಗಾಂಧಿ ಕುಟುಂಬದ ಹಿತಾಸಕ್ತಿ ಕಾಪಾಡಲು ಕಾಂಗ್ರೆಸ್ ಕಾರ್ಯಕರ್ತರನ್ನು ಬಳಸಿಕೊಳ್ಳುತ್ತಿದೆ ಎಂದರು.

ಆಲೂಗಡ್ಡೆಯಲ್ಲಿ ಚಿನ್ನ ತೆಗೆಯೋದು ಹೇಗೆ ಅಂತ ರಾಹುಲ್ ಗಾಂಧಿ ಹೇಳಿದ್ದರು. 50 ಲಕ್ಷ ಹಾಕಿ ಸಾವಿರಾರು ಕೋಟಿ ಹಣ ಪಡೆಯೋದು ಎಂಬ ಬಗ್ಗೆ ಪಾಠ ಮಾಡಿದ್ದರು. ಇನ್ನೊಬ್ಬರು ಕೃಷಿ ಮಾಡಿ ಆಸ್ತಿ ಮಾಡಿದವರು. ಇದೀಗ ಅವರು ಬೇಲ್ ಮೇಲೆ ಹೊರಗಿದ್ದಾರೆ. ದಿನವೂ ಕೃಷಿ ಮಾಡುವ ರೈತರು ಕಷ್ಟದಲ್ಲಿದ್ದಾಗ ಇವರು ಮಾತ್ರ ಕೃಷಿಯಲ್ಲಿ ಸಾವಿರಾರು ಕೋಟಿ ಹಣ ಗಳಿಸಿದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು