5:18 PM Saturday14 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಹಗರಣಗಳ ಸರದಾರ; ಮೇವು ತಿಂದೋರು ಜೈಲಿನಲ್ಲಿದ್ದಾರೆ, ಈಗ ಪೇಪರ್ ತಿಂದೋರು ಕೂಡ ಜೈಲಿಗೆ ಹೋಗುತ್ತಾರೆ: ಸಿ.ಟಿ.ರವಿ

13/06/2022, 20:00

ಬೆಂಗಳೂರು(reporterkarnataka.com): ಹಗರಣಗಳ ಸರದಾರ ಕಾಂಗ್ರೆಸ್ ಪಕ್ಷ. ಕಾಲಿನಿಂದ ತಲೆಯವರೆಗೂ ಹಗರಣ ಹೊದ್ದುಕೊಂಡಿರುವುದು ಕಾಂಗ್ರೆಸ್. ಮೇವು ತಿಂದವರು ಜೈಲಿನಲ್ಲಿದ್ದಾರೆ. ಈಗ ಪೇಪರ್ ತಿಂದವರು ಜೈಲಿಗೆ ಹೋಗುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯರ್ಶಿ ಸಿ.ಟಿ.ರವಿ ಭವಿಷ್ಯ ವ್ಯಂಗ್ಯವಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ನವರು ಸಂವಿಧಾನಕ್ಕಿಂತ ಮೇಲ್ಪಟ್ಟವರಾ? ಕಾಂಗ್ರೆಸ್​ನವರಿಗೆ ಭಯ ಯಾಕೆ? ಎಂದು ಪ್ರಶ್ನಿಸಿದರು.

ಇಂಡಿಯನ್ ಆಯಿಲ್ ಸ್ಕ್ಯಾಮ್, 2ಜಿ ಸ್ಪೆಕ್ಟ್ರಂ, ಆಗಸ್ಟಾ ವೆಸ್ಟ್​ಲ್ಯಾಂಡ್, ಕೆಜಿ ಬೇಸಿನ್ ಹಗರಣವನ್ನು ಕಾಂಗ್ರೆಸ್​ ​ಮಾಡಿದೆ. ಇದೀಗ ಭ್ರಷ್ಟಾಚಾರ ನಡೆಸಿದವರಿಗೆ ಭ್ರಷ್ಟಾಚಾರಿಗಳೇ ಬೆಂಬಲ ಕೊಡುತ್ತಿದ್ದಾರೆ. ಹಾಗಲಕಾಯಿಗೆ ಬೇವಿನ ಕಾಯಿ ಸಾಕ್ಷಿ ಎಂಬಂತೆ ಕಾಂಗ್ರೆಸ್​ನವರು ಬೀದಿಗಿಳಿದಿದ್ದಾರೆ. ಗಾಂಧಿ ಕುಟುಂಬದ ಹಿತಾಸಕ್ತಿ ಕಾಪಾಡಲು ಕಾಂಗ್ರೆಸ್ ಕಾರ್ಯಕರ್ತರನ್ನು ಬಳಸಿಕೊಳ್ಳುತ್ತಿದೆ ಎಂದರು.

ಆಲೂಗಡ್ಡೆಯಲ್ಲಿ ಚಿನ್ನ ತೆಗೆಯೋದು ಹೇಗೆ ಅಂತ ರಾಹುಲ್ ಗಾಂಧಿ ಹೇಳಿದ್ದರು. 50 ಲಕ್ಷ ಹಾಕಿ ಸಾವಿರಾರು ಕೋಟಿ ಹಣ ಪಡೆಯೋದು ಎಂಬ ಬಗ್ಗೆ ಪಾಠ ಮಾಡಿದ್ದರು. ಇನ್ನೊಬ್ಬರು ಕೃಷಿ ಮಾಡಿ ಆಸ್ತಿ ಮಾಡಿದವರು. ಇದೀಗ ಅವರು ಬೇಲ್ ಮೇಲೆ ಹೊರಗಿದ್ದಾರೆ. ದಿನವೂ ಕೃಷಿ ಮಾಡುವ ರೈತರು ಕಷ್ಟದಲ್ಲಿದ್ದಾಗ ಇವರು ಮಾತ್ರ ಕೃಷಿಯಲ್ಲಿ ಸಾವಿರಾರು ಕೋಟಿ ಹಣ ಗಳಿಸಿದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು