7:49 AM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಮೀಸಲಾತಿ ಕೊಟ್ಟರೆ ಸರಕಾರಕ್ಕೆ ಸನ್ಮಾನ ಇಲ್ಲದಿದ್ದರೆ ಉಗ್ರ ಹೋರಾಟ:  ಪಂಚಮಸಾಲಿ ಪೀಠದ ಜಗದ್ಗುರು ಎಚ್ಚರಿಕೆ 

13/06/2022, 21:21

ಹಾವೇರಿ(reporterkarnataka.com): ಮೀಸಲಾತಿ ಕೊಟ್ಟರೆ ಸರಕಾರಕ್ಕೆ ಸನ್ಮಾನ ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಸರಕಾರಕ್ಕೆ ಎಚ್ಚರಿಕೆ ನೀಡಿದರು.

ರಟ್ಟೀಹಳ್ಳಿ ಪಟ್ಟಣದಲ್ಲಿ ಸೋಮವಾರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಬೊಮ್ಮಾಯಿ ಅವರೇ ನೀವು ಮೀಸಲಾತಿ ನೀಡುತ್ತೇವೆಂದು ಹೇಳಿದ್ರಿ, ಮೀಸಲಾತಿ ಕೊಟ್ಟು ಋಣ ತೀರಿಸಿ, ನಿಮ್ಮ ಕೈಯಲ್ಲಿ ಮೀಸಲಾತಿ ನೀಡಲು ಆಗದಿದ್ದರೆ ಸ್ಪಷ್ಟವಾಗಿ ಹೇಳಿಬಿಡಿ.ನಮ್ಮ ತಾಳ್ಮೆಯನ್ನ ಪರೀಕ್ಷೆ ಮಾಡಬೇಡಿ, ಸಹನೆ ಕಟ್ಟೆ ಹೊಡೆಯುವುದರೊಳಗೆ ಸರ್ಕಾರ ಸೂಕ್ತ ನಿರ್ಣಯ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಮೀಸಲಾತಿ ಒತ್ತಾಯಿಸಿ ಜೂನ್ 27ಕ್ಕೆ ಸಿಎಂ ಮನೆ ಮುಂದೆ ಸತ್ಯಾಗ್ರಹ ಮಾಡುವುದು ಶತಸಿದ್ಧ. ಹಾವೇರಿ ಜಿಲ್ಲೆಯಲ್ಲಿರುವ ನಮ್ಮ ಸಮಾಜದ ಜನರು ಮಾತ್ರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿಲ್ಲ ರಾಜ್ಯದ ಮೂಲೆಮೂಲೆಗಳಿಂದ ಒಂದು ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆಯಿದೆ. ಜೂ 27 ರ ಒಳಗಾಗಿ ಮೀಸಲಾತಿ ಘೋಷಣೆ ಮಾಡಬೇಕೆಂದು ಅವರು ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು