2:41 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಖೇಲೋ ಇಂಡಿಯಾ ಕ್ರೀಡಾಕೂಟ: ಹರಿಯಾಣ ಪ್ರಥಮ; ಕರ್ನಾಟಕಕ್ಕೆ 3ನೇ ಸ್ಥಾನ

14/06/2022, 11:51

ಹೊಸದಿಲ್ಲಿ(reporterkarnataka.com): ಹರಿಯಾಣದಲ್ಲಿ ನಡೆದ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ಕರ್ನಾಟಕ 3ನೇ ಸ್ಥಾನ ಪಡೆಯಿತು. 22 ಚಿನ್ನ, 17 ಬೆಳ್ಳಿ, 28 ಕಂಚು ಸೇರಿದಂತೆ ಒಟ್ಟು 67 ಪದಕಗಳನ್ನು ರಾಜ್ಯದ ಕ್ರೀಡಾಪಟುಗಳು ಗೆದ್ದಿದ್ದಾರೆ.

ಈಜು, ಕುಸ್ತಿ, ಕಬ್ಬಡ್ಡಿ, ಖೋ ಖೋ, ಬ್ಯಾಡ್ಮಿಂಟನ್​, ಟ್ರ್ಯಾಕ್​ ರನ್ನಿಂಗ್​ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ಕರ್ನಾಟಕದ ಆಟಗಾರರು ಪಾರಮ್ಯ ಮೆರೆದಿದ್ದಾರೆ. ರಾಜ್ಯದ ಖ್ಯಾತ ಕ್ರೀಡೆಯಾದ ಮಲ್ಲಗಂಬದಲ್ಲಿ ತಂಡ ಚಿನ್ನದ ಸಾಧನೆ ಮಾಡಿದೆ.

ಕರ್ನಾಟಕ ತಂಡದಲ್ಲಿ 84 ಪುರುಷರು, 110 ಮಹಿಳೆಯರು ಸೇರಿ 194 ಕ್ರೀಡಾಪಟುಗಳು ಭಾಗವಹಿಸಿದ್ದರು.

ಹರಿಯಾಣ ಪ್ರಥಮ ಸಾಧನೆ: ಹರಿಯಾಣ ಕ್ರೀಡಾಪಟುಗಳು 137 ಪದಕ ಸಾಧನೆ ಮಾಡಿದ್ದು, ಇದರಲ್ಲಿ 52 ಚಿನ್ನ, 39 ಬೆಳ್ಳಿ, 46 ಕಂಚಿನ ಪದಕಗಳು ಸೇರಿವೆ. ಈ ಮೂಲಕ ಕ್ರೀಡಾಕೂಟದಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ. ಮಹಾರಾಷ್ಟ್ರ 125 ಪದಕಗಳ ಸಮೇತ 2ನೇ ಸ್ಥಾನ ಪಡೆದಿದ್ದು, 45+40+40 ಸಾಧನೆ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು