2:28 AM Thursday17 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಐಗಳ ಮಲ್ಲಾಪುರ; ಸಮರ್ಪಕವಾಗಿ ನೀರು ಪೂರೈಸದಿದ್ದಲ್ಲಿ ಗ್ರಾಪಂ ಗೆ ಬೀಗ: ಎಐಕೆಎಸ್ ಎಚ್ಚರಿಕೆ

14/06/2022, 19:35

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು, ಚೌಡಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐಗಳ ಮಲ್ಲಾಪುರ ಗ್ರಾಮದಲ್ಲಿ ಕೆಲ ದಿನಗಳಿಂದ ಸಮರ್ಪಕವಾಗಿ ಕುಡಿಯಲು ನೀರು ಪೂರೈಸಬೇಕೆಂದು ಅಖಿಲ ಭಾರತ ಕಿಸಾನ್ ಸಭಾ ನೇತೃತ್ವದಲ್ಲಿ ಗ್ರಾಮಸ್ಥರು ಆಗ್ರಹಿಸಿದ್ದಾರೆ. 

ಸಂಬಂಧಿಸಿದಂತೆ ಕೆಲ ಗ್ರಾಮಸ್ಥರು ಚೌಡಾಪುರ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗೆ ಹಕ್ಕೋತ್ತಾಯ ಪತ್ರ ನೀಡಿದ್ದು, ಅಭಿವೃದ್ಧಿ ಅಧಿಕಾರಿ ಅನಿಪಸ್ಥಿತಿಯಲ್ಲಿ ಬಿಲ್ ಕಲೆಕ್ಟರ್ ಕಮ್ಮಾರ ನಾಗರಾಜ ರವರಿಗೆ ನೀಡಿದ್ದಾರೆ. ಇತ್ತೀಚೆಗೆ ಗ್ರಾಮದಲ್ಲಿ ನೀರನ್ನು ಸಮರ್ಪಕವಾಗಿ ಪೂರೈಸುತ್ತಿಲ್ಲ, ನೀರಗಂಟಿ ತನ್ನ ಕರ್ಥವ್ಯ ಸರಿಯಾಗಿ ನಿರ್ವಹಿಸುತ್ತಿಲ್ಲ, ನೀರಿನ ತೊಟ್ಟಿಯ ಸುತ್ತ ಮುತ್ತ ದಪ್ಪ ಪಾಚಿ ಬೆಳೆದು ಹಿರಿಯರು ಮಹಿಳೆಯರು, ಮಕ್ಕಳು ಬಿದ್ದು ಗಾಯಗೊಂಡಿದ್ದಾರೆ. ಮತ್ತು ಗ್ರಾಮದ ಬಹುತೇಕ ನಳಗಳಿಗೆ ಟ್ಯಾಪ್ ಹಾಕಿಸಿಲ್ಲ, ನೀರಿನ ಟ್ಯಾಂಕ್ ಮತ್ತು ನೀರಿನ ತೊಟ್ಟಿ ಸ್ವಚ್ಚಗೊಳಿಸಿಲ್ಲ, ಪರಿಣಾಮ ಬಹುತೇಕ ಗ್ರಾಮಸ್ಥರು ಸಾಂಕ್ರಾಮಿಕ ರೋಗಗಳಿಂದ ನರಳುಂವತಾಗಿದೆ. ಕಾರಣ ಮೊದಲು ನೀರಿನ ಟ್ಯಾಂಕ್ ಸ್ವಚ್ಚಗೊಳಿಸಿಬೇಕು,  ನೀರಿನ ತೊಟ್ಟಿ ಸ್ವಚ್ಚಗೊಳಿಸಿ ಸುತ್ತಲೂ ಸ್ವಚ್ಚಗೊಳಿಸಬೇಕಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಈ ಕುರಿತು ಗ್ರಾಪಂ ಅಭಿವೃದ್ಧಿ ಅಧಿಕಾರಿ ಶೀಘ್ರವೇ ಕ್ರಮ ಜರುಗಿಸಬೇಕು, ನಿರ್ಲಕ್ಷ್ಯ ತೋರಿದ್ದಲ್ಲಿ ಗ್ರಾಪಂ ಗೆ ಬೀಗ ಜಡಿದು ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಗ್ರಾಮಸ್ಥರು ಈ ಸಂದರ್ಭದಲ್ಲಿ ಎಚ್ಚರಿಸಿದ್ದಾರೆ. ಅಖಿಲ ಭಾರತ ಕಿಸಾನ್ ಸಭಾ ಮುಖಂಡ ಕೆ.ಓಬಳೇಶ, ಉಳ್ಳಂಗಿ ಕುಬೇರ, ಹೊನ್ನೂರಪ್ಪ,ಬೊಮ್ಮಣ್ಣ, ಕೆ.ಪಾಪನಾಯಕ, ಡಿ.ಪಾಪನಾಯಕ, ಜಗಳೂರಪ್ಪ, ಪಂಚಾರ ಶಾಪ್ ಓಬಳೇಶ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು