11:55 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಐಗಳ ಮಲ್ಲಾಪುರ; ಸಮರ್ಪಕವಾಗಿ ನೀರು ಪೂರೈಸದಿದ್ದಲ್ಲಿ ಗ್ರಾಪಂ ಗೆ ಬೀಗ: ಎಐಕೆಎಸ್ ಎಚ್ಚರಿಕೆ

14/06/2022, 19:35

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು, ಚೌಡಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐಗಳ ಮಲ್ಲಾಪುರ ಗ್ರಾಮದಲ್ಲಿ ಕೆಲ ದಿನಗಳಿಂದ ಸಮರ್ಪಕವಾಗಿ ಕುಡಿಯಲು ನೀರು ಪೂರೈಸಬೇಕೆಂದು ಅಖಿಲ ಭಾರತ ಕಿಸಾನ್ ಸಭಾ ನೇತೃತ್ವದಲ್ಲಿ ಗ್ರಾಮಸ್ಥರು ಆಗ್ರಹಿಸಿದ್ದಾರೆ. 

ಸಂಬಂಧಿಸಿದಂತೆ ಕೆಲ ಗ್ರಾಮಸ್ಥರು ಚೌಡಾಪುರ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗೆ ಹಕ್ಕೋತ್ತಾಯ ಪತ್ರ ನೀಡಿದ್ದು, ಅಭಿವೃದ್ಧಿ ಅಧಿಕಾರಿ ಅನಿಪಸ್ಥಿತಿಯಲ್ಲಿ ಬಿಲ್ ಕಲೆಕ್ಟರ್ ಕಮ್ಮಾರ ನಾಗರಾಜ ರವರಿಗೆ ನೀಡಿದ್ದಾರೆ. ಇತ್ತೀಚೆಗೆ ಗ್ರಾಮದಲ್ಲಿ ನೀರನ್ನು ಸಮರ್ಪಕವಾಗಿ ಪೂರೈಸುತ್ತಿಲ್ಲ, ನೀರಗಂಟಿ ತನ್ನ ಕರ್ಥವ್ಯ ಸರಿಯಾಗಿ ನಿರ್ವಹಿಸುತ್ತಿಲ್ಲ, ನೀರಿನ ತೊಟ್ಟಿಯ ಸುತ್ತ ಮುತ್ತ ದಪ್ಪ ಪಾಚಿ ಬೆಳೆದು ಹಿರಿಯರು ಮಹಿಳೆಯರು, ಮಕ್ಕಳು ಬಿದ್ದು ಗಾಯಗೊಂಡಿದ್ದಾರೆ. ಮತ್ತು ಗ್ರಾಮದ ಬಹುತೇಕ ನಳಗಳಿಗೆ ಟ್ಯಾಪ್ ಹಾಕಿಸಿಲ್ಲ, ನೀರಿನ ಟ್ಯಾಂಕ್ ಮತ್ತು ನೀರಿನ ತೊಟ್ಟಿ ಸ್ವಚ್ಚಗೊಳಿಸಿಲ್ಲ, ಪರಿಣಾಮ ಬಹುತೇಕ ಗ್ರಾಮಸ್ಥರು ಸಾಂಕ್ರಾಮಿಕ ರೋಗಗಳಿಂದ ನರಳುಂವತಾಗಿದೆ. ಕಾರಣ ಮೊದಲು ನೀರಿನ ಟ್ಯಾಂಕ್ ಸ್ವಚ್ಚಗೊಳಿಸಿಬೇಕು,  ನೀರಿನ ತೊಟ್ಟಿ ಸ್ವಚ್ಚಗೊಳಿಸಿ ಸುತ್ತಲೂ ಸ್ವಚ್ಚಗೊಳಿಸಬೇಕಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಈ ಕುರಿತು ಗ್ರಾಪಂ ಅಭಿವೃದ್ಧಿ ಅಧಿಕಾರಿ ಶೀಘ್ರವೇ ಕ್ರಮ ಜರುಗಿಸಬೇಕು, ನಿರ್ಲಕ್ಷ್ಯ ತೋರಿದ್ದಲ್ಲಿ ಗ್ರಾಪಂ ಗೆ ಬೀಗ ಜಡಿದು ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಗ್ರಾಮಸ್ಥರು ಈ ಸಂದರ್ಭದಲ್ಲಿ ಎಚ್ಚರಿಸಿದ್ದಾರೆ. ಅಖಿಲ ಭಾರತ ಕಿಸಾನ್ ಸಭಾ ಮುಖಂಡ ಕೆ.ಓಬಳೇಶ, ಉಳ್ಳಂಗಿ ಕುಬೇರ, ಹೊನ್ನೂರಪ್ಪ,ಬೊಮ್ಮಣ್ಣ, ಕೆ.ಪಾಪನಾಯಕ, ಡಿ.ಪಾಪನಾಯಕ, ಜಗಳೂರಪ್ಪ, ಪಂಚಾರ ಶಾಪ್ ಓಬಳೇಶ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು