3:23 PM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಐಗಳ ಮಲ್ಲಾಪುರ; ಸಮರ್ಪಕವಾಗಿ ನೀರು ಪೂರೈಸದಿದ್ದಲ್ಲಿ ಗ್ರಾಪಂ ಗೆ ಬೀಗ: ಎಐಕೆಎಸ್ ಎಚ್ಚರಿಕೆ

14/06/2022, 19:35

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು, ಚೌಡಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐಗಳ ಮಲ್ಲಾಪುರ ಗ್ರಾಮದಲ್ಲಿ ಕೆಲ ದಿನಗಳಿಂದ ಸಮರ್ಪಕವಾಗಿ ಕುಡಿಯಲು ನೀರು ಪೂರೈಸಬೇಕೆಂದು ಅಖಿಲ ಭಾರತ ಕಿಸಾನ್ ಸಭಾ ನೇತೃತ್ವದಲ್ಲಿ ಗ್ರಾಮಸ್ಥರು ಆಗ್ರಹಿಸಿದ್ದಾರೆ. 

ಸಂಬಂಧಿಸಿದಂತೆ ಕೆಲ ಗ್ರಾಮಸ್ಥರು ಚೌಡಾಪುರ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗೆ ಹಕ್ಕೋತ್ತಾಯ ಪತ್ರ ನೀಡಿದ್ದು, ಅಭಿವೃದ್ಧಿ ಅಧಿಕಾರಿ ಅನಿಪಸ್ಥಿತಿಯಲ್ಲಿ ಬಿಲ್ ಕಲೆಕ್ಟರ್ ಕಮ್ಮಾರ ನಾಗರಾಜ ರವರಿಗೆ ನೀಡಿದ್ದಾರೆ. ಇತ್ತೀಚೆಗೆ ಗ್ರಾಮದಲ್ಲಿ ನೀರನ್ನು ಸಮರ್ಪಕವಾಗಿ ಪೂರೈಸುತ್ತಿಲ್ಲ, ನೀರಗಂಟಿ ತನ್ನ ಕರ್ಥವ್ಯ ಸರಿಯಾಗಿ ನಿರ್ವಹಿಸುತ್ತಿಲ್ಲ, ನೀರಿನ ತೊಟ್ಟಿಯ ಸುತ್ತ ಮುತ್ತ ದಪ್ಪ ಪಾಚಿ ಬೆಳೆದು ಹಿರಿಯರು ಮಹಿಳೆಯರು, ಮಕ್ಕಳು ಬಿದ್ದು ಗಾಯಗೊಂಡಿದ್ದಾರೆ. ಮತ್ತು ಗ್ರಾಮದ ಬಹುತೇಕ ನಳಗಳಿಗೆ ಟ್ಯಾಪ್ ಹಾಕಿಸಿಲ್ಲ, ನೀರಿನ ಟ್ಯಾಂಕ್ ಮತ್ತು ನೀರಿನ ತೊಟ್ಟಿ ಸ್ವಚ್ಚಗೊಳಿಸಿಲ್ಲ, ಪರಿಣಾಮ ಬಹುತೇಕ ಗ್ರಾಮಸ್ಥರು ಸಾಂಕ್ರಾಮಿಕ ರೋಗಗಳಿಂದ ನರಳುಂವತಾಗಿದೆ. ಕಾರಣ ಮೊದಲು ನೀರಿನ ಟ್ಯಾಂಕ್ ಸ್ವಚ್ಚಗೊಳಿಸಿಬೇಕು,  ನೀರಿನ ತೊಟ್ಟಿ ಸ್ವಚ್ಚಗೊಳಿಸಿ ಸುತ್ತಲೂ ಸ್ವಚ್ಚಗೊಳಿಸಬೇಕಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಈ ಕುರಿತು ಗ್ರಾಪಂ ಅಭಿವೃದ್ಧಿ ಅಧಿಕಾರಿ ಶೀಘ್ರವೇ ಕ್ರಮ ಜರುಗಿಸಬೇಕು, ನಿರ್ಲಕ್ಷ್ಯ ತೋರಿದ್ದಲ್ಲಿ ಗ್ರಾಪಂ ಗೆ ಬೀಗ ಜಡಿದು ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಗ್ರಾಮಸ್ಥರು ಈ ಸಂದರ್ಭದಲ್ಲಿ ಎಚ್ಚರಿಸಿದ್ದಾರೆ. ಅಖಿಲ ಭಾರತ ಕಿಸಾನ್ ಸಭಾ ಮುಖಂಡ ಕೆ.ಓಬಳೇಶ, ಉಳ್ಳಂಗಿ ಕುಬೇರ, ಹೊನ್ನೂರಪ್ಪ,ಬೊಮ್ಮಣ್ಣ, ಕೆ.ಪಾಪನಾಯಕ, ಡಿ.ಪಾಪನಾಯಕ, ಜಗಳೂರಪ್ಪ, ಪಂಚಾರ ಶಾಪ್ ಓಬಳೇಶ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು