3:06 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಲಿವ್‌ ಇನ್‌ ಸಂಬಂಧದಲ್ಲಿ ಜನಿಸಿದ ಮಗು ತಂದೆಯ ಆಸ್ತಿಗೆ ಅರ್ಹ: ಸುಪ್ರೀಂ ಕೋರ್ಟ್‌  ಮಹತ್ವದ ತೀರ್ಪು

14/06/2022, 21:02

ಹೊಸದಿಲ್ಲಿ (reporterkarnataka.com): ಪುರುಷ ಮತ್ತು ಮಹಿಳೆಯ ದೀರ್ಘಕಾಲದ ಲಿವ್‌ ಇನ್‌(ಸಹಬಾಳ್ವೆ)  ಸಂಬಂಧದಲ್ಲಿ ಹುಟ್ಟಿದ ಮಗು ತಂದೆ ಆಸ್ತಿಯಲ್ಲಿ ಪಾಲನ್ನು ಪಡೆಯುವ ಹಕ್ಕು ಹೊಂದಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ತಂದೆ ಮತ್ತು ತಾಯಿ ಮದುವೆಯಾಗಿಲ್ಲ ಎಂಬ ಕಾರಣಕ್ಕೆ ಮಗುವಿಗೆ ಆಸ್ತಿಯಲ್ಲಿ ಹಕ್ಕಿಲ್ಲವೆಂದು ಕೇರಳ ಹೈಕೋರ್ಟ್‌ ನೀಡಿದ್ದ ತೀರ್ಪು ಅನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌, ಆದರೆ ಮಗುವಿನ ಪೋಷಕರು ಮದುವೆಯಾಗದಿದ್ದರೂ, ಅವರು ದೀರ್ಘಕಾಲದವರೆಗೆ ಪತಿ-ಪತ್ನಿಯಂತೆ ಒಟ್ಟಿಗೆ ವಾಸಿಸುತ್ತಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಡಿಎನ್‌ಎ ಪರೀಕ್ಷೆಯಲ್ಲಿ ಮಗು ತಮ್ಮದೇ ಎಂದು ಸಾಬೀತುಪಡಿಸಿದರೆ, ಆ ಮಗು ತಂದೆಯ ಆಸ್ತಿಗೆ ಅರ್ಹವಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.

ಕೇರಳದಲ್ಲಿ ವ್ಯಕ್ತಿಯೊಬ್ಬ ತಂದೆಯ ಆಸ್ತಿಯಿಂದ ವಂಚಿತನಾಗಿದ್ದೇನೆಂದು ಹೈಕೋರ್ಟ್‌ ಮೆಟ್ಟಿಲೇರಿದ್ದ. ತಾನು ಅಕ್ರಮ ಸಂತಾನ ಎಂದು ಹೇಳುವ ಮೂಲಕ ಆಸ್ತಿ ಹಕ್ಕುಗಳಿಂದ ತನ್ನನ್ನು ಹೊರಹಾಕಲಾಗಿದೆ ಎಂದು ಆತ ವಾದಿಸಿದ್ದ. ಆದರೆ ಆ ವ್ಯಕ್ತಿಯ ಹೆತ್ತವರು ಮದುವೆಯೇ ಆಗಿಲ್ಲ ಎಂದು ಉಲ್ಲೇಖಿಸಿದ್ದ ಕೇರಳ ಹೈಕೋರ್ಟ್‌, ಆಸ್ತಿಯ ಮೇಲೆ ಆತನಿಗೆ ಯಾವುದೇ ಹಕ್ಕಿಲ್ಲ ಎಂದು ತೀರ್ಪು ನೀಡಿತ್ತು.

ಇದನ್ನು ಪ್ರಶ್ನಿಸಿ ಆತ ಸುಪ್ರೀಂ ಮೆಟ್ಟಿಲೇರಿದ್ದ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಜೀರ್ ಮತ್ತು ವಿಕ್ರಮ್ ನಾಥ್ ಅವರಿದ್ದ ಪೀಠ, ಕೇರಳ ಹೈಕೋರ್ಟ್‌ ತೀರ್ಪನ್ನು ತಳ್ಳಿ ಹಾಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು