2:25 AM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಡ್ರೈವರ್ ಜತೆ ಲವ್: ಮಗಳಿಗೆ ಆಯ್ಕೆಯ ಸ್ವಾತಂತ್ರ್ಯವಿದೆ ಎಂದ ಹೈಕೋರ್ಟ್‌

15/06/2022, 09:44

ಮುಂಬೈ(reporterkarnataka.com): ಮಗಳು ವಯಸ್ಕಳಾಗಿರುವುದರಿಂದ ಆಯ್ಕೆಯ ಸ್ವಾತಂತ್ರ್ಯವಿದೆ. ಹೀಗಾಗಿ ಮಗಳನ್ನು ಪೋಷಕರ ಸುಪರ್ದಿಗೆ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ ತಂದೆ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ತಿರಸ್ಕರಿಸಿದೆ.

ಡ್ರೈವರ್ ಜೊತೆ ಇಂಜಿನಿಯರಿಂಗ್ ವಿದ್ಯಾರ್ಥಿನಿ ಪ್ರೇಮ ಪ್ರಕರಣಕ್ಕೆ ಸಂಬಂಧಿಸಿ ಪುತ್ರಿಗಾಗಿ ತಂದೆ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಸಲ್ಲಿಸಿದ್ದರು.

ಈ ಬಗ್ಗೆ ಹೈಕೋರ್ಟ್‌ ಚರ್ಚೆ ವಿಚಾರಣೆ ನಡೆಸಿ, ಮಕ್ಕಳಿಗಾಗಿ ಎಲ್ಲವನ್ನೂ ತ್ಯಾಗ ಮಾಡಿದ ತಂದೆ-ತಾಯಿಯರಿದ್ದಾರೆ. ತಂದೆ-ತಾಯಿಗಾಗಿ ಎಲ್ಲವನ್ನೂ ತ್ಯಾಗ ಮಾಡಿದ ಮಕ್ಕಳಿದ್ದಾರೆ. ಪರಸ್ಪರ ಪ್ರೀತಿಯಿದ್ದರೆ ಇಂತಹ ಸ್ಥಿತಿ ಉದ್ಭವಿಸುವುದಿಲ್ಲ. ತಂದೆ ತಾಯಿಗಿಂತ ದೇವರಿಲ್ಲ, ಅವರ ಋಣ ತೀರಿಸಲಾಗಲ್ಲ ಎಂದು ಮನುಸ್ಮೃತಿಯಲ್ಲಿನ ವಾಕ್ಯವನ್ನು ಉಲ್ಲೇಖಿಸಿದೆ.

ಪ್ರೇಮ ಕುರುಡಾಗಿರುವುದರಿಂದ ಪೋಷಕರ ಪ್ರೀತಿ ಕಾಣುವುದಿಲ್ಲ. ಇಂದು ಹೆತ್ತವರಿಗೆ ಮಾಡಿದ್ದೇ ನಾಳೆ ಮಕ್ಕಳಿಗೂ ಆಗಬಹುದು ಎಂದು ನ್ಯಾ.ಬಿ.ವೀರಪ್ಪ, ನ್ಯಾ.ಕೆ.ಎಸ್.ಹೇಮಲೇಖಾರ ಪೀಠ ಅಭಿಪ್ರಾಯ ಪಟ್ಟಿದೆ.

ಮಗಳು ವಯಸ್ಕಳಾಗಿರುವುದರಿಂದ ಆಯ್ಕೆಯ ಸ್ವಾತಂತ್ರ್ಯವಿದೆ. ಹೀಗಾಗಿ ಮಗಳನ್ನು ಪೋಷಕರ ಸುಪರ್ದಿಗೆ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ ತಂದೆ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ತಿರಸ್ಕರಿಸಿದೆ.

ಇತ್ತ ಪೋಷಕರೊಂದಿಗೆ ತೆರಳಲು 19 ವರ್ಷದ ಮಗಳು ನಕಾರ ಮಾಡಿದ್ದು ವಯಸ್ಕಳಾಗಿರುವುದರಿಂದ ಪ್ರೀತಿಸಿ ವಿವಾಹವಾಗಿರುವುದಾಗಿ ಹೇಳಿದ್ದಾಳೆ. ಹಾಗೂ ಆಕೆಯನ್ನು ಚೆನ್ನಾಗಿ ನೋಡಿಕೊಳ್ಳುವುದಾಗಿ ಪ್ರಿಯಕರ ಕೂಡ ಕೋರ್ಟ್‌ಗೆ ಭರವಸೆ ನೀಡಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು