11:33 AM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಸಿದ್ದರಾಮಯ್ಯ ಸಂತೆಯಲ್ಲಿ ಮೆಂತೆ ಕದ್ದವರೆಂದು ನಾನು ಆತ್ಮಕಥೆಯಲ್ಲಿ ಬರೆದಿಲ್ಲ: ಮಾಜಿ ಸಚಿವೆ ಮೋಟಮ್ಮ

15/06/2022, 19:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತೆಯಲ್ಲಿ ಮೆಂತೆ ಕದ್ದವರೆಂದು ನಾನು ಆತ್ಮಕಥೆಯಲ್ಲಿ ಬರೆದಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕಿ, ಮಾಜಿ ಸಚಿವೆ ಮೋಟಮ್ಮ ಹೇಳಿದರು.

ಬುಧವಾರ ಇಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರಕಾರ ಅಧಿಕಾರಕ್ಕೆ ಬಂದಾಗ ನನ್ನನ್ನ ಕಡೆಗಣಿಸಲಾಯಿತು. ಮಹಿಳಾ ಕೋಟದಲ್ಲಿ ನನಗೆ ಸಚಿವ ಸ್ಥಾನ ನೀಡಬಹುದಿತ್ತು ಎಂದು ಬೇಸರ ವ್ಯಕ್ತಪಡಿಸಿದರು.

ನಮ್ಮಂಥವರು ಚುನಾವಣೆ ಎದುರಿಸೋಕೆ ಕಷ್ಟ.ಕಳೆದ ಎಲೆಕ್ಷನ್ ನಲ್ಲಿ ಸಾಕಷ್ಟು ನೊಂದಿದ್ದೇನೆ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ. ನನ್ನ ಮಗಳಿಗೆ ಟಿಕೆಟ್ ಕೇಳಿದ್ದೇನೆ ಎಂದರು.

ಚುನಾವಣೆ ವೆಚ್ಚ ಭರಿಸಲು ಮನೆ ಭೋಗ್ಯಕ್ಕೆ ಹಾಕಿದ್ದೇನೆ. 8 ಚುನಾವಣೆ ಎದುರಿಸಿದ್ದೇನೆ, 2018ರ ಚುನಾವಣೆ ಬಲು ದುಸ್ತರ ಎಂದು ನುಡಿದರು.

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಕಾಂಗ್ರೆಸ್ ಸೇರ್ಪಡೆಗೆ ನನ್ನ ವಿರೋಧವಿದೆ. ಬಿಜೆಪಿಯವರ ಕೈ-ಬಾಯಿ ಸರಿ ಇಲ್ಲ. ಅಲ್ಲಿ ಮೇವು ಸಿಗುತ್ತೆ ಅಂತ ಕೆಲವರು ಬಿಜೆಪಿ ಸೇರಿದರು. ಕುಮಾರಸ್ವಾಮಿಗೆ ಟಿಕೆಟ್ ಕೊಡುವುದು ಬದಲು ಕಾಂಗ್ರೆಸ್ ನ ಬೂತ್ ಕಾರ್ಯಕರ್ತನಿಗೆ ನೀಡಲಿ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು