2:02 PM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಮಾಯೊದಪ್ಪೆ ಮಂತ್ರದೇವತೆಗೆ ಮುಹೂರ್ತ: ಕಲಾವಿದೆರ್‌ ಕುಡ್ಲ ತಂಡದಿಂದ ಪೌರಾಣಿಕ ನಾಟಕ

15/06/2022, 20:51

ಮಂಗಳೂರು(reporterkarnataka.com): ಪ್ರಾಪ್ತಿ ಕಲಾವಿದೆರ್‌ ಕುಡ್ಲ ಪ್ರದರ್ಶಿಸಲಿರುವ ಕಲಾ ಸವ್ಯಸಾಚಿ ಪ್ರಶಾಂತ್‌ ಸಿ.ಕೆ. ರಚಿಸಿ ನಿರ್ದೇಶಿಸಿರುವ ಮಾಯೊದಪ್ಪೆ ಮಂತ್ರದೇವತೆ ತುಳು ಪೌರಾಣಿಕ ನಾಟಕದ ಮುಹೂರ್ತ ಕದ್ರಿಮಂಜುನಾಥೇಶ್ವರ ಕ್ಷೇತ್ರದಲ್ಲಿ ನಡೆಯಿತು.

ಪೌರಾಣಿಕ ರಂಗಭೂಮಿಯ ದಿಗ್ಗಜರಾದ ಜಿ.ಕೆ.ರೈ, ಸತೀಶ್‌ ಕದ್ರಿ, ಉದಯ್‌ ಆಚಾರ್‌, ಮಾಧವ ಇರುವೈಲ್‌ ಜತೆ ಸುಹಾನ್‌ ಕುಳಾಯಿ ಮೊದಲಾದ ಯುವ ಕಲಾವಿದರ ಸೇರ್ಪಡೆಯೊಂದಿಗೆ ನಾಟಕ ರಂಗಭೂಮಿ ಪಯಣಕ್ಕೆ ಸಜ್ಜಾಗುತ್ತಿದೆ.


ಮುಹೂರ್ತ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ರಂಗಭೂಮಿ ನಿರ್ದೇಶಕ ಕಿಶೋರ್‌ ಡಿ.ಶೆಟ್ಟಿ ಮಾತನಾಡಿ, ಪೌರಾಣಿಕ ನಾಟಕದ ಕುರಿತು ಪ್ರೇಕ್ಷಕರ ನಿರೀಕ್ಷೆಯೂ ಬೆಟ್ಟದಷ್ಟಿರುತ್ತದೆ, ಖರ್ಚುವೆಚ್ಚ, ಕಷ್ಟ ನಷ್ಟಗಳೂ ಹೆಚ್ಚು, ಕಷ್ಟ ಪಟ್ಟು ದುಡಿದರೆ ರಂಗಭೂಮಿಯಲ್ಲಿ ಹೆಸರು ಅಚ್ಚಳಿಯದೆ ಉಳಿಯುತ್ತದೆ ಎಂದರು.

ಉದ್ಘಾಟಿಸಿದ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಮಾತನಾಡಿ, ಸಮೃದ್ಧವಾದ ತುಳು ರಂಗಭೂಮಿಯಲ್ಲಿ ಯುವ ಕಲಾವಿದರಿಗೆ, ಪ್ರಯೋಗಶೀಲರಿಗೆ ಹೆಚ್ಚಿನ ಅವಕಾಶ ಇದೆ, ಇದನ್ನು ಇತ್ತೀಚೆಗೆ ಪೌರಾಣಿಕ ನಾಟಕಗಳು ಮಾಡುತ್ತಿರುವ ಪ್ರದರ್ಶನಗಳ ದಾಖಲೆಯೇ ಹೇಳುತ್ತದೆ ಎಂದರು.

ಕ್ಯಾಟ್ಕ ಸಂಘದ ಅಧ್ಯಕ್ಷ ಮೋಹನ ಕೊಪ್ಪಲ ಮಾತನಾಡಿ, ಕರೋನಾ ಬಳಿಕ ಕಲಾವಿದರಿಗೆ ಮತ್ತೆ ಒಳ್ಳೆಯ ಅವಕಾಶಗಳು ಸಿಗುತ್ತಿದ್ದು, ಸದುಪಯೋಗಪಡಿಸಿಕೊಳ್ಳಿ, ನಾಟಕ ಅತಿ ಹೆಚ್ಚು ಪ್ರದರ್ಶನಗಳನ್ನು ನೀಡಲಿ ಎಂದು ಹಾರೈಸಿದರು.

ನಿರ್ದೇಶಕ ಪ್ರಶಾಂತ್‌ ಸಿ.ಕೆ. ಸ್ವಾಗತಿಸಿದರು. ವಿಜೆ ಮಧುರಾಜ್‌ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು