11:34 AM Tuesday13 - May 2025
ಬ್ರೇಕಿಂಗ್ ನ್ಯೂಸ್
ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಎಸ್ ಡಿಎ ತಿಮ್ಮಯ್ಯ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳ ದಾಳಿ; 80 ಲಕ್ಷಕ್ಕೂ ಅಧಿಕ ಸೊತ್ತು ವಶ

17/06/2022, 11:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯಲ್ಲೂ ಎಸಿಬಿ ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಜಿಲ್ಲೆಯ ಕಡೂರು ಸಮೀಪದ ಅಜ್ಜಂಪುರ ತಾಲೂಕಿನಲ್ಲಿ ಎಸ್ ಡಿಎ ತಿಮ್ಮಯ್ಯ ನಿವಾಸದ ಮೇಲೆ ಬೆಳ್ಳಂಬೆಳಗ್ಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಡಿವೈಎಸ್ಪಿ ಅನಿಲ್ ರಾಥೋಡ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಏಕಕಾಲದಲ್ಲಿ ಮೂರು ಕಡೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಡೂರು ಪಟ್ಟಣದ ತಿಮ್ಮಯ್ಯ ನಿವಾಸ,ತಿಮ್ಮಯ್ಯ ಕರ್ತವ್ಯ ನಿರ್ವಹಿಸುತ್ತಿದ್ದ ಅಜ್ಜಂಪುರ ಪುರಸಭೆ ಕಚೇರಿ, ತಿಮ್ಮಯ್ಯ ತಂದೆಯ ಬಸೂರು ನಿವಾಸದ ಮೇಲೂ ದಾಳಿ ನಡೆಸಲಾಗಿದೆ.

ಆದಾಯಕ್ಕಿಂತ 80 ಲಕ್ಷಕ್ಕೂ ಅಧಿಕ ಹಣ ಗಳಿಸಿರುವ ಆರೋಪ ಇವರ ಮೇಲಿದೆ. ಮೂರು ಕಡೆಗಳಲ್ಲೂ ಎಸಿಬಿ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು