6:00 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕಟೀಲು ದೇಗುಲ ಸಂಪರ್ಕಿಸುವ ದೇವರಗುಡ್ಡೆ ಸಮೀಪ ಗುಡ್ಡೆ ಕುಸಿತ: ಲಾಕ್ ಡೌನ್ ನಿಂದ ತಪ್ಪಿದ ಭಾರಿ ಅನಾಹುತ

18/06/2021, 19:24

ಕಿನ್ನಿಗೋಳಿ(reporterkarnataka news): ಕಳೆದ ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಬಿರುಸಿನ ಮಳೆಯ ಕಾರಣ ಕಟೀಲು- ಬಜಪೆ ರಾಜ್ಯ ಹೆದ್ದಾರಿಯ ದೇವರಗುಡ್ಡೆ ಬಳಿ ಇಂದು ಗುಡ್ಡ ಕುಸಿದಿದ್ದು, ಬಂಡೆಗಲ್ಲು ರಸ್ತೆಗೆ ಬಿದ್ದಿದೆ. ಲಾಕ್ ಡೌನ್ ನಿಂದ ವಾಹನ ಮತ್ತು ಜನ ಸಂಚಾರ ವಿರಳವಾಗಿರುವುದರಿಂದ ಭಾರಿ ಅನಾಹುತ ತಪ್ಪಿದೆ.

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭ ಕಟೀಲು- ಬಜಪೆ ರಾಜ್ಯ ಹೆದ್ದಾರಿ ವಿಸ್ತರಿಸಲು ಹೆದ್ದಾರಿ ಬದಿಯ ಗುಡ್ಡಗಳನ್ನು ಕಡಿದು ರಸ್ತೆ ಅಗಲಗೊಳಿಸಲಾಗಿತ್ತು. ಈ ಗುಡ್ಡ ಮಳೆಗೆ ಕುಸಿದು ಬಿದ್ದಿದೆ.

ಕಳೆದ ಮಳೆಗಾಲದಲ್ಲಿ ಕೂಡ ದೇವರಗುಡ್ಡೆ ಬಳಿ ರಸ್ತೆ ಕುಸಿದಿತ್ತು. ಆದರೆ ಸಂಬಂಧಪಟ್ಟ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ.

 ಶುಕ್ರವಾರ ಮುಂಜಾನೆ ಸುರಿದ ಭಾರಿ ಮಳೆಗೆ ರಸ್ತೆ ಬದಿ ಗುಡ್ಡದ ಬೃಹದಾಕಾರದ ಬಂಡೆಕಲ್ಲು ಸಹಿತ ಮಣ್ಣು ಮುಖ್ಯರಸ್ತೆಗೆ ಕುಸಿದು ಸಂಚಾರ ಅಸ್ತವ್ಯಸ್ತಗೊಂಡಿತು. ಸದಾ ಕಾಲ ಬ್ಯುಸಿಯಾಗಿರುವ ಕಟೀಲು- ಬಜಪೆ ರಾಜ್ಯ ಹೆದ್ದಾರಿ ಈಗ ಕೊರೊನಾ ಲಾಕ್ ಡೌನ್ ಕಾರಣದಿಂದಾಗಿ ಜನ- ವಾಹನ ಸಂಚಾರ ಅತಿ ವಿರಳವಾಗಿದ್ದರಿಂದ ಭಾರಿ ಅನಾಹುತ ತಪ್ಪಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು