2:14 PM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಕಟೀಲು ದೇಗುಲ ಸಂಪರ್ಕಿಸುವ ದೇವರಗುಡ್ಡೆ ಸಮೀಪ ಗುಡ್ಡೆ ಕುಸಿತ: ಲಾಕ್ ಡೌನ್ ನಿಂದ ತಪ್ಪಿದ ಭಾರಿ ಅನಾಹುತ

18/06/2021, 19:24

ಕಿನ್ನಿಗೋಳಿ(reporterkarnataka news): ಕಳೆದ ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಬಿರುಸಿನ ಮಳೆಯ ಕಾರಣ ಕಟೀಲು- ಬಜಪೆ ರಾಜ್ಯ ಹೆದ್ದಾರಿಯ ದೇವರಗುಡ್ಡೆ ಬಳಿ ಇಂದು ಗುಡ್ಡ ಕುಸಿದಿದ್ದು, ಬಂಡೆಗಲ್ಲು ರಸ್ತೆಗೆ ಬಿದ್ದಿದೆ. ಲಾಕ್ ಡೌನ್ ನಿಂದ ವಾಹನ ಮತ್ತು ಜನ ಸಂಚಾರ ವಿರಳವಾಗಿರುವುದರಿಂದ ಭಾರಿ ಅನಾಹುತ ತಪ್ಪಿದೆ.

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭ ಕಟೀಲು- ಬಜಪೆ ರಾಜ್ಯ ಹೆದ್ದಾರಿ ವಿಸ್ತರಿಸಲು ಹೆದ್ದಾರಿ ಬದಿಯ ಗುಡ್ಡಗಳನ್ನು ಕಡಿದು ರಸ್ತೆ ಅಗಲಗೊಳಿಸಲಾಗಿತ್ತು. ಈ ಗುಡ್ಡ ಮಳೆಗೆ ಕುಸಿದು ಬಿದ್ದಿದೆ.

ಕಳೆದ ಮಳೆಗಾಲದಲ್ಲಿ ಕೂಡ ದೇವರಗುಡ್ಡೆ ಬಳಿ ರಸ್ತೆ ಕುಸಿದಿತ್ತು. ಆದರೆ ಸಂಬಂಧಪಟ್ಟ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ.

 ಶುಕ್ರವಾರ ಮುಂಜಾನೆ ಸುರಿದ ಭಾರಿ ಮಳೆಗೆ ರಸ್ತೆ ಬದಿ ಗುಡ್ಡದ ಬೃಹದಾಕಾರದ ಬಂಡೆಕಲ್ಲು ಸಹಿತ ಮಣ್ಣು ಮುಖ್ಯರಸ್ತೆಗೆ ಕುಸಿದು ಸಂಚಾರ ಅಸ್ತವ್ಯಸ್ತಗೊಂಡಿತು. ಸದಾ ಕಾಲ ಬ್ಯುಸಿಯಾಗಿರುವ ಕಟೀಲು- ಬಜಪೆ ರಾಜ್ಯ ಹೆದ್ದಾರಿ ಈಗ ಕೊರೊನಾ ಲಾಕ್ ಡೌನ್ ಕಾರಣದಿಂದಾಗಿ ಜನ- ವಾಹನ ಸಂಚಾರ ಅತಿ ವಿರಳವಾಗಿದ್ದರಿಂದ ಭಾರಿ ಅನಾಹುತ ತಪ್ಪಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು